<p><strong>ದಾವಣಗೆರೆ</strong>: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೇ. 4ರಂದು ದಾವಣಗೆರೆಗೆ ಆಗಮಿಸಲಿದ್ದು, ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಪ್ರಚಾರ ನಡೆಸಲಿದ್ದಾರೆ.</p>.<p>ಅಂದು ಮ.2ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಚರ್ಚೆಗೆ ನಾನು ರೆಡಿ</strong></p>.<p>ದಾವಣಗೆರೆ ಅಭಿವೃದ್ಧಿಪಡಿಸಿದ್ದು, ಯಾರು ಎಂಬುದು ದಾವಣಗೆರೆ ಜನರಿಗೆ ಗೊತ್ತು. ಆದರೆ ಈ ಬಗ್ಗೆ ಚರ್ಚಿಸಲು ನಾನು ತಯಾರಿದ್ದೇನೆ ಎಂದು ಮಲ್ಲಿಕಾರ್ಜುನ್ ಸಿದ್ದೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.</p>.<p>‘ಕೆಲಸಕ್ಕೆ ಸರ್ಕಾರದ ಆದೇಶ, ಟೆಂಡರ್ ಹಾಗೂ ಕಾರ್ಯಾದೇಶ ಯಾವಾಗ ಆಯಿತು ಎಂಬುದು ನನಗೆ ಗೊತ್ತಿದೆ. ಅದರಲ್ಲಿ ಎಷ್ಟು ಹಣ ಲೂಟಿ ಹೊಡೆದಿದ್ದು ನನಗೆ ತಿಳಿದಿದೆ’ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೇ. 4ರಂದು ದಾವಣಗೆರೆಗೆ ಆಗಮಿಸಲಿದ್ದು, ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಪ್ರಚಾರ ನಡೆಸಲಿದ್ದಾರೆ.</p>.<p>ಅಂದು ಮ.2ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಚರ್ಚೆಗೆ ನಾನು ರೆಡಿ</strong></p>.<p>ದಾವಣಗೆರೆ ಅಭಿವೃದ್ಧಿಪಡಿಸಿದ್ದು, ಯಾರು ಎಂಬುದು ದಾವಣಗೆರೆ ಜನರಿಗೆ ಗೊತ್ತು. ಆದರೆ ಈ ಬಗ್ಗೆ ಚರ್ಚಿಸಲು ನಾನು ತಯಾರಿದ್ದೇನೆ ಎಂದು ಮಲ್ಲಿಕಾರ್ಜುನ್ ಸಿದ್ದೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.</p>.<p>‘ಕೆಲಸಕ್ಕೆ ಸರ್ಕಾರದ ಆದೇಶ, ಟೆಂಡರ್ ಹಾಗೂ ಕಾರ್ಯಾದೇಶ ಯಾವಾಗ ಆಯಿತು ಎಂಬುದು ನನಗೆ ಗೊತ್ತಿದೆ. ಅದರಲ್ಲಿ ಎಷ್ಟು ಹಣ ಲೂಟಿ ಹೊಡೆದಿದ್ದು ನನಗೆ ತಿಳಿದಿದೆ’ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>