‘ದೇವಸ್ಥಾನ, ಪುರಾಣಗಳಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ. ಶೂದ್ರರೆಲ್ಲಾ ಬ್ರಾಹ್ಮಣರ ಸೇವಕರು ಎಂಬುದನ್ನು ಸಾರಿವೆ. ಮನುಷ್ಯರನ್ನು ಮನುಷ್ಯರಂತೆ ಕಾಣದ ಇಂತಹ ಪುರಾಣ, ಮನುಸ್ಮೃತಿಯಿಂದ ದೇಶದ ಬಹುಸಂಖ್ಯಾತರಿಗೆ ಏನೂ ಪ್ರಯೋಜನವಿಲ್ಲ. ಆದರೆ ಕೆಲವರು ಪುರಾಣ, ಮನುಸ್ಮೃತಿಯನ್ನು ತಲೆ ಮೇಲೆ ಹೊತ್ತು ಅದರ ಪ್ರಕಾರ ಆಡಳಿತ ನಡೆಸುತ್ತೇವೆಂದು ಕುಣಿಯುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.