‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜಕ್ಕೆ ಸ್ಪಂದಿಸಿದ್ದರು. ಒಂದು ಸಮಿತಿ ರಚಿಸಿ ಶಿಫಾರಸು ಕೂಡ ಪಡೆದಿದ್ದರು. ಬಸವರಾಜ ಬೊಮ್ಮಾಯಿ ಅವರು ಕೂಡಾ ವಾಲ್ಮೀಕಿ ಸಮಾಜದೊಂದಿಗೆ ಇದ್ದು, ಸಮಾಜದ ಸಭೆಗಳಲ್ಲಿ ಭಾಗವಹಿಸಿ ಸ್ಥೈರ್ಯ ತುಂಬಿದ್ದಾರೆ. ಈವಿಚಾರವಾಗಿ ಸಿಎಂ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.