<p><strong>ದಾವಣಗೆರೆ</strong>: ಭೂಮಿಯನ್ನು ಗುರುತಿಸಿ ದಾಖಲೆ ನೀಡಲು ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ದಾವಣಗೆರೆ ಜಿಲ್ಲೆಯು ಸೇರ್ಪಡೆಗೊಂಡಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ‘ಆಸ್ತಿ ಕಾರ್ಡ್’ ದೊರೆಯಲಿದೆ.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ದಿಶಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಅವರು ಈ ಯೋಜನೆ ಕುರಿತು ಮಾಹಿತಿ ನೀಡಿದರು.</p>.<p>ರಾಜ್ಯದ 16 ಜಿಲ್ಲೆಗಳು ಮೊದಲ ಹಂತದಲ್ಲಿ ‘ಸ್ವಾಮಿತ್ವ’ ಯೋಜನೆಯ ವ್ಯಾಪ್ತಿಗೆ ಬರಲಿವೆ. ಅದರಲ್ಲಿ ದಾವಣಗೆರೆಯೂ ಒಂದು. ಒಂದು ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿಗಳನ್ನು ಈಗಾಗಲೇ ಆಯ್ಕೆ ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ.ಕಂದಾಯ ಗ್ರಾಮಗಳಿಗೆ ಈ ಯೋಜನೆಯಿಂದ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಗ್ರಾಮೀಣ ಆಸ್ತಿಗಳ ಜಿಯೋಸ್ಟೇಷಿಯಲ್ ಡೇಟಾಬೇಸ್ ಅನ್ನು ರಚಿಸುವ ಮೂಲಕ ಈ ಅಂತರವನ್ನು ಪರಿಹರಿಸುವ ಗುರಿ ಹೊಂದಿದ್ದು, ಸುಧಾರಿತ ತಂತ್ರಜ್ಞಾನದೊಂದಿಗೆ ಡ್ರೋನ್ ಮೂಲಕ ಸಮೀಕ್ಷೆ ಕಾರ್ಯ ಮಾಡಲಾಗುವುದು ಎಂದರು.</p>.<p>ಗ್ರಾಮಗಳಲ್ಲಿರುವ ನಿವೇಶನ, ಮನೆಗಳ ಸರ್ವೇ ಮಾಡಲಾಗುತ್ತದೆ. ಇದರಿಂದ ಆಸ್ತಿಯನ್ನು ಗುರುತಿಸಲು ಸಹಾಯವಾಗುತ್ತದೆ. ವ್ಯಾಜ್ಯಗಳ ಸಂದರ್ಭದಲ್ಲಿ ಇದನ್ನೇ ಆಧಾರವನ್ನಾಗಿಸಿಕೊಂಡು ತೀರ್ಮಾನ ಕೈಗೊಳ್ಳಲು ಸುಲಭವಾಗಲಿದೆ. ಅಷ್ಟೇ ಅಲ್ಲದೇ ಭೂ, ದಾಖಲೆ, ಸಾಲವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.</p>.<p>ಗ್ರಾಮೀಣ ಯೋಜನೆ ಪ್ರಕ್ರಿಯೆಗಳಿಗೆ ಇದರಿಂದ ಸಹಕಾರಿ ಆಗಲಿದೆ. ಜನರು ತಮ್ಮ ಆಸ್ತಿಗಳ ದಾಖಲೆಗಳನ್ನು ಭದ್ರಪಡಿಸಿಕೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಭೂಮಿಯನ್ನು ಗುರುತಿಸಿ ದಾಖಲೆ ನೀಡಲು ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ದಾವಣಗೆರೆ ಜಿಲ್ಲೆಯು ಸೇರ್ಪಡೆಗೊಂಡಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ‘ಆಸ್ತಿ ಕಾರ್ಡ್’ ದೊರೆಯಲಿದೆ.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ದಿಶಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಅವರು ಈ ಯೋಜನೆ ಕುರಿತು ಮಾಹಿತಿ ನೀಡಿದರು.</p>.<p>ರಾಜ್ಯದ 16 ಜಿಲ್ಲೆಗಳು ಮೊದಲ ಹಂತದಲ್ಲಿ ‘ಸ್ವಾಮಿತ್ವ’ ಯೋಜನೆಯ ವ್ಯಾಪ್ತಿಗೆ ಬರಲಿವೆ. ಅದರಲ್ಲಿ ದಾವಣಗೆರೆಯೂ ಒಂದು. ಒಂದು ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿಗಳನ್ನು ಈಗಾಗಲೇ ಆಯ್ಕೆ ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ.ಕಂದಾಯ ಗ್ರಾಮಗಳಿಗೆ ಈ ಯೋಜನೆಯಿಂದ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಗ್ರಾಮೀಣ ಆಸ್ತಿಗಳ ಜಿಯೋಸ್ಟೇಷಿಯಲ್ ಡೇಟಾಬೇಸ್ ಅನ್ನು ರಚಿಸುವ ಮೂಲಕ ಈ ಅಂತರವನ್ನು ಪರಿಹರಿಸುವ ಗುರಿ ಹೊಂದಿದ್ದು, ಸುಧಾರಿತ ತಂತ್ರಜ್ಞಾನದೊಂದಿಗೆ ಡ್ರೋನ್ ಮೂಲಕ ಸಮೀಕ್ಷೆ ಕಾರ್ಯ ಮಾಡಲಾಗುವುದು ಎಂದರು.</p>.<p>ಗ್ರಾಮಗಳಲ್ಲಿರುವ ನಿವೇಶನ, ಮನೆಗಳ ಸರ್ವೇ ಮಾಡಲಾಗುತ್ತದೆ. ಇದರಿಂದ ಆಸ್ತಿಯನ್ನು ಗುರುತಿಸಲು ಸಹಾಯವಾಗುತ್ತದೆ. ವ್ಯಾಜ್ಯಗಳ ಸಂದರ್ಭದಲ್ಲಿ ಇದನ್ನೇ ಆಧಾರವನ್ನಾಗಿಸಿಕೊಂಡು ತೀರ್ಮಾನ ಕೈಗೊಳ್ಳಲು ಸುಲಭವಾಗಲಿದೆ. ಅಷ್ಟೇ ಅಲ್ಲದೇ ಭೂ, ದಾಖಲೆ, ಸಾಲವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.</p>.<p>ಗ್ರಾಮೀಣ ಯೋಜನೆ ಪ್ರಕ್ರಿಯೆಗಳಿಗೆ ಇದರಿಂದ ಸಹಕಾರಿ ಆಗಲಿದೆ. ಜನರು ತಮ್ಮ ಆಸ್ತಿಗಳ ದಾಖಲೆಗಳನ್ನು ಭದ್ರಪಡಿಸಿಕೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>