ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ವಿಚಾರ: ಪುತ್ರಿಯಿಂದಲೇ ತಂದೆಯ ಹತ್ಯೆ

Last Updated 23 ಮೇ 2019, 20:35 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲ್ಲೂಕಿನ ಕೋಟೆ ಮಲ್ಲೂರಿನಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ತಂದೆ ಮತ್ತು ಮಗಳ ನಡುವೆ ಗಲಾಟೆ ನಡೆದು ಮಗಳೇ ತಂದೆಯನ್ನು ಕೊಲೆ ಮಾಡಿದ್ದಾಳೆ.

ಕೋಟೆಮಲ್ಲೂರಿನ ನಿಂಗಪ್ಪ (85) ಕೊಲೆಯಾದ ವ್ಯಕ್ತಿ. ಈತನ ಪುತ್ರಿ ಗಿರಿಜಮ್ಮ (60) ಕೊಲೆ ಆರೋಪಿ. ಮೇ 5ರಂದು ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ್ದಾರೆ. ಪರಿಸ್ಥಿತಿ ವಿಕೋಪ ಹೋಗಿದ್ದು, ಆಕೆ ಕಲ್ಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾಳೆ.

ಹಲ್ಲೆಗೊಳಗಾದ ನಿಂಗಪ್ಪ ಕೋಮಾಗೆ ಹೋಗಿದ್ದರು. ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನಿಂಗಪ್ಪ ಗುರುವಾರ ಮೃತಪಟ್ಟಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದಾಳೆ. ಕೊಲೆ ಪ್ರಕರಣ ದಾಖಲಿಸಲಾಗಿದೆ ಹೊನ್ನಾಳಿ ಠಾಣೆಯ ಪಿಎಸ್‌ಐ ರಾಘವೇಂದ್ರ ಖಾಂಡಿಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT