ಹೊನ್ನಾಳಿ: ತಾಲ್ಲೂಕಿನ ಕೋಟೆ ಮಲ್ಲೂರಿನಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ತಂದೆ ಮತ್ತು ಮಗಳ ನಡುವೆ ಗಲಾಟೆ ನಡೆದು ಮಗಳೇ ತಂದೆಯನ್ನು ಕೊಲೆ ಮಾಡಿದ್ದಾಳೆ.
ಕೋಟೆಮಲ್ಲೂರಿನ ನಿಂಗಪ್ಪ (85) ಕೊಲೆಯಾದ ವ್ಯಕ್ತಿ. ಈತನ ಪುತ್ರಿ ಗಿರಿಜಮ್ಮ (60) ಕೊಲೆ ಆರೋಪಿ. ಮೇ 5ರಂದು ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ್ದಾರೆ. ಪರಿಸ್ಥಿತಿ ವಿಕೋಪ ಹೋಗಿದ್ದು, ಆಕೆ ಕಲ್ಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾಳೆ.
ಹಲ್ಲೆಗೊಳಗಾದ ನಿಂಗಪ್ಪ ಕೋಮಾಗೆ ಹೋಗಿದ್ದರು. ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನಿಂಗಪ್ಪ ಗುರುವಾರ ಮೃತಪಟ್ಟಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದಾಳೆ. ಕೊಲೆ ಪ್ರಕರಣ ದಾಖಲಿಸಲಾಗಿದೆ ಹೊನ್ನಾಳಿ ಠಾಣೆಯ ಪಿಎಸ್ಐ ರಾಘವೇಂದ್ರ ಖಾಂಡಿಕೆ ತಿಳಿಸಿದರು.