‘ಈ ಹಿಂದಿನ ಕಾರ್ಯದರ್ಶಿ ಅವಧಿಯಲ್ಲಿ ಪಾಕೆಟ್ ಹಾಗೂ ಗೋಡೆ ಕ್ಯಾಲೆಂಡರ್ಗಳನ್ನು ಮಾಡಿಸಲು ₹ 4 ಕೋಟಿ ಖರ್ಚು ಮಾಡಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಎಲ್ಪಿಜಿ ಸಿಲಿಂಡರ್, ಗ್ಯಾಸ್ ಸ್ಟೌವ್ ಕೊಡಲು 2017–18ನೇ ಸಾಲಿನಲ್ಲಿ ₹ 66 ಕೋಟಿ ವೆಚ್ಚ ಮಾಡಲಾಗಿದೆ. ಟ್ರೈನಿಂಗ್ ಹಾಗೂ ಟೂಲ್ ಕಿಟ್ ಕೊಡಲು ₹ 83.89 ಕೋಟಿ ಖರ್ಚು ಮಾಡಲಾಗಿತ್ತು. ಇವುಗಳಲ್ಲಿ ಅವ್ಯವಹಾರ ನಡೆದಿರುವುದು ಕಂಡು ಬಂದಿದ್ದರಿಂದ ತನಿಖೆ ನಡೆಸುವಂತೆ ರೋಹಿಣಿ ಸಿಂಧೂರಿ ಅವರನ್ನು ಕೋರಿದ್ದೆವು. ಅದಕ್ಕೆ ಅವರು ಒಪ್ಪಿಕೊಂಡು, ಆ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದರು. ಆದರೆ, ಗುತ್ತಿಗೆದಾರರ ಒತ್ತಡಕ್ಕೆ ಮಣಿದು ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ಕಾರ್ಮಿಕರ ಹಿತಕ್ಕೆ ವಿರುದ್ಧವಾಗಿ ವರ್ಗಾವಣೆ ಮಾಡಿರುವುದು ಖಂಡನೀಯ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.