ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಧಿಕಾರಿಗಳು ಎರಡು ತಂಡಗಳನ್ನು ರಚಿಸಿಕೊಂಡು ನಗರದ ತಹಶೀಲ್ದಾರ್ ಕಚೇರಿ ಆವರಣ, ಎಪಿಎಂಸಿ, ಈರುಳ್ಳಿ ಮಾರ್ಕೆಟ್, ಪಿಸಾಳೆ ಕಾಂಪೌಡ್, ಅಗ್ನಿಶಾಮಕ ದಳದ ಕಚೇರಿ ಹಿಂಭಾಗ, ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಪುನರ್ವಸತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ.