<p><strong>ಚನ್ನಗಿರಿ:</strong> ಇಬ್ಬರು ಮಹಿಳೆಯರನ್ನು ಮಸೀದಿಯ ಎದುರು ಸಾರ್ವಜನಿಕವಾಗಿ ಥಳಿಸಿದ ತಾಲ್ಲೂಕಿನ ತಾವರೆಕೆರೆ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡಾ.ಅರ್ಚನಾ ಮುಜುಂದಾರ್ ಅವರ ಕಾರು ತಡೆದು ಮುಸ್ಲಿಂ ಸಮುದಾಯದ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು.</p><p>ಅಮಾನವೀಯ ಕೃತ್ಯವನ್ನು ಸಮರ್ಥಿಸಿಕೊಂಡ ಪ್ರತಿಭಟನಕಾರರು, ಪೊಲೀಸರು ಬಂಧಿಸಿರುವ ಆರೋಪಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.</p><p>ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿ ಚನ್ನಗಿರಿಯತ್ತ ಪ್ರಯಾಣ ಬೆಳೆಸಲು ಮುಂದಾದ ಅರ್ಚನಾ ಅವರ ಕಾರನ್ನು ಗುಂಪೊಂದು ತಡೆಯಿತು. ಇದರಲ್ಲಿ ಆರೋಪಿಗಳ ಕುಟುಂಬದ ಸದಸ್ಯರು ಹೆಚ್ಚಾಗಿದ್ದರು. ಆರೋಪಿ ಪುರುಷರು ಮಾಡಿದ್ದು ತಪ್ಪಲ್ಲ, ಪ್ರಕರಣದಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರದ್ದೇ ತಪ್ಪಿದೆ. ಅವರ ಗಂಡಂದಿರು ದೂರು ನೀಡಿದ್ದರಿಂದ ಮಸೀದಿ ಕ್ರಮ ಕೈಗೊಂಡಿದೆ. ಅಮಾಯಕರ ಬಂಧನದಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p><p>‘ಮಹಿಳೆಯರಿಬ್ಬರ ಮೇಲೆ ಪುರುಷರು ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ವಿಡಿಯೊದಲ್ಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ’ ಎಂದು ಡಾ.ಅರ್ಚನಾ ಮುಜುಂದಾರ್ ಪ್ರತಿಭಟನಕಾರರಿಗೆ ಹೇಳಿದರು.</p><p>ಪರ ಪುರುಷನೊಂದಿಗೆ ಸಲುಗೆಯಿಂದ ವರ್ತಿಸಿದ ಹಾಗೂ ಇದಕ್ಕೆ ಸಹಕಾರಿಸಿದ ಇಬ್ಬರು ಮಹಿಳೆಯರ ಮೇಲೆ ಮುಸ್ಲಿಂ ಸಮುದಾಯದ ಗುಂಪೊಂದು ಜಾಮೀಯಾ ಮಸೀದಿಯ ಎದುರು ಏ.9ರಂದು ಅಮಾನುಷವಾಗಿ ಹಲ್ಲೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.</p>.ಕೇಂದ್ರ ಸರ್ಕಾರದ ಲೋಪ ಮರೆಮಾಚಲು ಹೇಳಿಕೆ ತಿರುಚಿದ್ದಾರೆ: ಸಿದ್ದರಾಮಯ್ಯ ಗುಡುಗು.ವರದಕ್ಷಿಣೆ: ಊಟವಿಲ್ಲದೆ 21 Kgಗೆ ಕುಸಿದ ತೂಕ; ಮೃತ ಮಹಿಳೆಯ ಪತಿ, ಅತ್ತೆಗೆ ಶಿಕ್ಷೆ.BMRCL: ರೈಲಿನಲ್ಲಿ ಊಟ ಮಾಡಿದ ಮಹಿಳೆಗೆ ದಂಡ ಹಾಕಿದ 'ನಮ್ಮ ಮೆಟ್ರೋ'.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಇಬ್ಬರು ಮಹಿಳೆಯರನ್ನು ಮಸೀದಿಯ ಎದುರು ಸಾರ್ವಜನಿಕವಾಗಿ ಥಳಿಸಿದ ತಾಲ್ಲೂಕಿನ ತಾವರೆಕೆರೆ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡಾ.ಅರ್ಚನಾ ಮುಜುಂದಾರ್ ಅವರ ಕಾರು ತಡೆದು ಮುಸ್ಲಿಂ ಸಮುದಾಯದ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು.</p><p>ಅಮಾನವೀಯ ಕೃತ್ಯವನ್ನು ಸಮರ್ಥಿಸಿಕೊಂಡ ಪ್ರತಿಭಟನಕಾರರು, ಪೊಲೀಸರು ಬಂಧಿಸಿರುವ ಆರೋಪಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.</p><p>ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿ ಚನ್ನಗಿರಿಯತ್ತ ಪ್ರಯಾಣ ಬೆಳೆಸಲು ಮುಂದಾದ ಅರ್ಚನಾ ಅವರ ಕಾರನ್ನು ಗುಂಪೊಂದು ತಡೆಯಿತು. ಇದರಲ್ಲಿ ಆರೋಪಿಗಳ ಕುಟುಂಬದ ಸದಸ್ಯರು ಹೆಚ್ಚಾಗಿದ್ದರು. ಆರೋಪಿ ಪುರುಷರು ಮಾಡಿದ್ದು ತಪ್ಪಲ್ಲ, ಪ್ರಕರಣದಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರದ್ದೇ ತಪ್ಪಿದೆ. ಅವರ ಗಂಡಂದಿರು ದೂರು ನೀಡಿದ್ದರಿಂದ ಮಸೀದಿ ಕ್ರಮ ಕೈಗೊಂಡಿದೆ. ಅಮಾಯಕರ ಬಂಧನದಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p><p>‘ಮಹಿಳೆಯರಿಬ್ಬರ ಮೇಲೆ ಪುರುಷರು ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ವಿಡಿಯೊದಲ್ಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ’ ಎಂದು ಡಾ.ಅರ್ಚನಾ ಮುಜುಂದಾರ್ ಪ್ರತಿಭಟನಕಾರರಿಗೆ ಹೇಳಿದರು.</p><p>ಪರ ಪುರುಷನೊಂದಿಗೆ ಸಲುಗೆಯಿಂದ ವರ್ತಿಸಿದ ಹಾಗೂ ಇದಕ್ಕೆ ಸಹಕಾರಿಸಿದ ಇಬ್ಬರು ಮಹಿಳೆಯರ ಮೇಲೆ ಮುಸ್ಲಿಂ ಸಮುದಾಯದ ಗುಂಪೊಂದು ಜಾಮೀಯಾ ಮಸೀದಿಯ ಎದುರು ಏ.9ರಂದು ಅಮಾನುಷವಾಗಿ ಹಲ್ಲೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.</p>.ಕೇಂದ್ರ ಸರ್ಕಾರದ ಲೋಪ ಮರೆಮಾಚಲು ಹೇಳಿಕೆ ತಿರುಚಿದ್ದಾರೆ: ಸಿದ್ದರಾಮಯ್ಯ ಗುಡುಗು.ವರದಕ್ಷಿಣೆ: ಊಟವಿಲ್ಲದೆ 21 Kgಗೆ ಕುಸಿದ ತೂಕ; ಮೃತ ಮಹಿಳೆಯ ಪತಿ, ಅತ್ತೆಗೆ ಶಿಕ್ಷೆ.BMRCL: ರೈಲಿನಲ್ಲಿ ಊಟ ಮಾಡಿದ ಮಹಿಳೆಗೆ ದಂಡ ಹಾಕಿದ 'ನಮ್ಮ ಮೆಟ್ರೋ'.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>