<p><strong>ದಾವಣಗೆರೆ:</strong> ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆಡಿ ಅವರ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ರಜಪೂತ್ ಮಹಾಸಭಾ ಹಾಗೂ ವಿಷ್ಣು ಸಮಾಜದವತಿಯಿಂದ ಶುಕ್ರವಾರ ಪ್ರತಿಭಟನೆ ಹಾಗೂ ಬೈಕ್ ರ್ಯಾಲಿ ನಡೆಯಿತು.</p>.<p>ನಗರದ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡ ಮಹಾಸಭಾದ ಸದಸ್ಯರು ‘ಸುಖ್ದೇವ್ ಸಿಂಗ್ ಅಮರ್ ರಹೇ’ ಎಂದು ಘೋಷಣೆ ಕೂಗಿದರು. ಬಳಿಕ ಪಿ.ಬಿ.ರಸ್ತೆಯ ಮೂಲಕ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.</p>.<p>‘ಮಾನವೀಯ ಅಂತಃಕರಣ-ಸಮರಸ ಬಾಳ್ವೆಯನ್ನು ಪ್ರತಿಪಾದಿಸುತ್ತಾ ಜೀವನ ಸಾಗಿಸುತ್ತಿದ್ದ ಸುಖದೇವ್ ಸಿಂಗ್<br>ಹತ್ಯೆ ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯವಾಗಿದೆ. ಈ ಕೃತ್ಯದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಮಹಾಸಭಾ ಅಧ್ಯಕ್ಷ ಜೆ.ಈಶ್ವರ್ ಸಿಂಗ್ ಕವಿತಾಳ ಆಗ್ರಹಿಸಿದರು.</p>.<p>‘ಸಮಾಜದ ಮುಖಂಡರಿಗೆ ಜೀವಭಯವಿದ್ದು, ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಮುಂದೆ ಎಂದೂ ಇಂತಹ ಸಮಾಜ ಘಾತುಕ ಕೃತ್ಯ ನಡೆಯದಂತೆ ಸಮಾಜದ ಮುಖಂಡರಿಗೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಮೂಲ್ಸಿಂಗ್ ರಾಥೋಡ್, ಗೌತಮ್ಜೈನ್, ರಾಜು ಭಂಡಾರಿ, ಗಣಪತ್ಸಿಂಗ್, ಓಂಪ್ರಕಾಶ್, ರಾಜು ಪಟೇಲ್, ದಳಪತ್ಸಿಂಗ್, ಅಮರ್ ಸಿಂಗ್ ಭಾಟಿ, ಗೋಪಾಲ್ ಸಿಂಗ್ ಭಾಟಿ, ಗಣಪತ್ ಸಿಂಗ್ ದೇವ್ಡಾ, <br>ಗೌತಮ್ ಜೈನ್, ರಾಕೇಶ್ ರಾಹುಲ್, ರಾಜು ಜಿ. ಪಾಟೀಲ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆಡಿ ಅವರ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ರಜಪೂತ್ ಮಹಾಸಭಾ ಹಾಗೂ ವಿಷ್ಣು ಸಮಾಜದವತಿಯಿಂದ ಶುಕ್ರವಾರ ಪ್ರತಿಭಟನೆ ಹಾಗೂ ಬೈಕ್ ರ್ಯಾಲಿ ನಡೆಯಿತು.</p>.<p>ನಗರದ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡ ಮಹಾಸಭಾದ ಸದಸ್ಯರು ‘ಸುಖ್ದೇವ್ ಸಿಂಗ್ ಅಮರ್ ರಹೇ’ ಎಂದು ಘೋಷಣೆ ಕೂಗಿದರು. ಬಳಿಕ ಪಿ.ಬಿ.ರಸ್ತೆಯ ಮೂಲಕ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.</p>.<p>‘ಮಾನವೀಯ ಅಂತಃಕರಣ-ಸಮರಸ ಬಾಳ್ವೆಯನ್ನು ಪ್ರತಿಪಾದಿಸುತ್ತಾ ಜೀವನ ಸಾಗಿಸುತ್ತಿದ್ದ ಸುಖದೇವ್ ಸಿಂಗ್<br>ಹತ್ಯೆ ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯವಾಗಿದೆ. ಈ ಕೃತ್ಯದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಮಹಾಸಭಾ ಅಧ್ಯಕ್ಷ ಜೆ.ಈಶ್ವರ್ ಸಿಂಗ್ ಕವಿತಾಳ ಆಗ್ರಹಿಸಿದರು.</p>.<p>‘ಸಮಾಜದ ಮುಖಂಡರಿಗೆ ಜೀವಭಯವಿದ್ದು, ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಮುಂದೆ ಎಂದೂ ಇಂತಹ ಸಮಾಜ ಘಾತುಕ ಕೃತ್ಯ ನಡೆಯದಂತೆ ಸಮಾಜದ ಮುಖಂಡರಿಗೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಮೂಲ್ಸಿಂಗ್ ರಾಥೋಡ್, ಗೌತಮ್ಜೈನ್, ರಾಜು ಭಂಡಾರಿ, ಗಣಪತ್ಸಿಂಗ್, ಓಂಪ್ರಕಾಶ್, ರಾಜು ಪಟೇಲ್, ದಳಪತ್ಸಿಂಗ್, ಅಮರ್ ಸಿಂಗ್ ಭಾಟಿ, ಗೋಪಾಲ್ ಸಿಂಗ್ ಭಾಟಿ, ಗಣಪತ್ ಸಿಂಗ್ ದೇವ್ಡಾ, <br>ಗೌತಮ್ ಜೈನ್, ರಾಕೇಶ್ ರಾಹುಲ್, ರಾಜು ಜಿ. ಪಾಟೀಲ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>