ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಜಿ. ಉಮೇಶ್, ‘ರುದ್ರಪ್ಪ ದಾವಣಗೆರೆಯಲ್ಲಿನ ಮಗಳ ಮನೆಗೆ ಬಂದಿದ್ದರು. ಕಾಲಿಗೆ ಗಾಯವಾಗಿದ್ದ ಕಾರಣಕ್ಕೆ ಖಾಸಗಿ ಕ್ಲಿನಿಕ್ನ ವೈದ್ಯರ ಬಳಿಗೆ ಬಂದಿದ್ದರು. ವೈದ್ಯರು ಚುಚ್ಚುಮದ್ದು ನೀಡಿದ ಕೂಡಲೇ ಬಿದ್ದು ಒದ್ದಾಡಿ ಮೃತಪಟ್ಟಿದ್ದಾರೆ. ರುದ್ರಪ್ಪ ಸಾವಿಗೆ ಕಾರಣರಾದ ಡಾ. ವಿಶ್ವನಾಥ್ ಅವರ ಪ್ರಮಾಣಪತ್ರ ರದ್ದು ಮಾಡಿ ಕೂಡಲೇ ಬಂಧಿಸಬೇಕು. ಮೃತರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡಬೇಕು. ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.