<p><strong>ದಾವಣಗೆರೆ: </strong>ಬಿಸಿಯೂಟ ತಯಾರಕರಿಗೆ ಲಾಕ್ಡೌನ್ ಅವಧಿಯದ್ದೂ ಸೇರಿ ನಾಲ್ಕು ತಿಂಗಳ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ‘ ಸರ್ಕಾರ ದುಡಿಯುವ ಮಹಿಳೆಯರನ್ನು ಕಡೆಗಣಿಸಿದ್ದು, ಮುಖ್ಯ ಅಡುಗೆಯವರು ₹2,700 ಹಾಗೂ ಸಹಾಯಕ ಅಡುಗೆಯವರು ₹2,600 ಗೌರವ ಸಂಭಾವನೆ ಪಡೆಯುತ್ತಿದ್ದಾರೆ. ಇದರಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಘೇರಾವ್ ಹಾಕುತ್ತೇವೆ’ ಎಂದು ಎಚ್ಚರಿಸಿದರು.</p>.<p>ಬಿಸಿಯೂಟ ತಯಾರಕರನ್ನು ಕಾಯಂಗೊಳಿಸಬೇಕು. ಇಎಸ್ಐ, ಪಿಎಫ್, ನಿವೃತ್ತಿ ವೇತನ, ಇಡುಗಂಟು ಹಣ, ಅಪಘಾತ ಪರಿಹಾರ ವಿಮೆ, ಮರಣ ಪರಿಹಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಡಿಸಿ ‘ನಿಮ್ಮ ಜೊತೆ ನಾವಿದ್ದೇವೆ’ ಎಂದು ಭರವಸೆ ನೀಡಿದರು.</p>.<p>ಕಾರ್ಮಿಕ ಮುಖಂಡರಾದ ಆವರಗೆರೆ ವಾಸು, ಆವರಗೆರೆ ಚಂದ್ರು, ಬೆಳಲಗೆರೆ ರುದ್ರಮ್ಮ, ಜ್ಯೋತಿ ಲಕ್ಷ್ಮಿ, ಮಳಲಕೆರೆ ಜಯಮ್ಮ,, ಲಕ್ಷ್ಮಿ, ಮಹಮ್ಮದ್ ಬಾಷಾ, ಜ್ಯೋತಿಲಕ್ಷ್ಮಿ, ಪ್ರಮೀಳಾ, ಸರೋಜಾ, ಮಂಗಳಗೌರಿ, ಜಯಮ್ಮ, ವನಜಾಕ್ಷಿ, ಅರುಣ, ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಬಿಸಿಯೂಟ ತಯಾರಕರಿಗೆ ಲಾಕ್ಡೌನ್ ಅವಧಿಯದ್ದೂ ಸೇರಿ ನಾಲ್ಕು ತಿಂಗಳ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ‘ ಸರ್ಕಾರ ದುಡಿಯುವ ಮಹಿಳೆಯರನ್ನು ಕಡೆಗಣಿಸಿದ್ದು, ಮುಖ್ಯ ಅಡುಗೆಯವರು ₹2,700 ಹಾಗೂ ಸಹಾಯಕ ಅಡುಗೆಯವರು ₹2,600 ಗೌರವ ಸಂಭಾವನೆ ಪಡೆಯುತ್ತಿದ್ದಾರೆ. ಇದರಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಘೇರಾವ್ ಹಾಕುತ್ತೇವೆ’ ಎಂದು ಎಚ್ಚರಿಸಿದರು.</p>.<p>ಬಿಸಿಯೂಟ ತಯಾರಕರನ್ನು ಕಾಯಂಗೊಳಿಸಬೇಕು. ಇಎಸ್ಐ, ಪಿಎಫ್, ನಿವೃತ್ತಿ ವೇತನ, ಇಡುಗಂಟು ಹಣ, ಅಪಘಾತ ಪರಿಹಾರ ವಿಮೆ, ಮರಣ ಪರಿಹಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಡಿಸಿ ‘ನಿಮ್ಮ ಜೊತೆ ನಾವಿದ್ದೇವೆ’ ಎಂದು ಭರವಸೆ ನೀಡಿದರು.</p>.<p>ಕಾರ್ಮಿಕ ಮುಖಂಡರಾದ ಆವರಗೆರೆ ವಾಸು, ಆವರಗೆರೆ ಚಂದ್ರು, ಬೆಳಲಗೆರೆ ರುದ್ರಮ್ಮ, ಜ್ಯೋತಿ ಲಕ್ಷ್ಮಿ, ಮಳಲಕೆರೆ ಜಯಮ್ಮ,, ಲಕ್ಷ್ಮಿ, ಮಹಮ್ಮದ್ ಬಾಷಾ, ಜ್ಯೋತಿಲಕ್ಷ್ಮಿ, ಪ್ರಮೀಳಾ, ಸರೋಜಾ, ಮಂಗಳಗೌರಿ, ಜಯಮ್ಮ, ವನಜಾಕ್ಷಿ, ಅರುಣ, ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>