ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಗೌರವ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Published 1 ಆಗಸ್ಟ್ 2023, 6:09 IST
Last Updated 1 ಆಗಸ್ಟ್ 2023, 6:09 IST
ಅಕ್ಷರ ಗಾತ್ರ

ದಾವಣಗೆರೆ: ಬಿಸಿಯೂಟ ತಯಾರಕರಿಗೆ ಜೂನ್ ಹಾಗೂ ಜುಲೈ ತಿಂಗಳ ಗೌರವಧನ ಬಿಡುಗಡೆ ಮಾಡಬೇಕು ಎಂದು  ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

‘ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ 2023ರ ಜೂನ್  ಹಾಗೂ ಜುಲೈ ತಿಂಗಳು ಗೌರವ ಧನ ಪಾವತಿಯಾಗಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಎರಡು ತಿಂಗಳ ಗೌರವಧನ ಬಿಡುಗಡೆ ಮಾಡಬೇಕು’ ಎಂದು ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಆವರಗೆರೆ ಚಂದ್ರು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಹಾಗೂ ಉಪಹಾರ ಯೋಜನೆ ತಾಲ್ಲೂಕು ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಳಲ್ಕೆರೆ ಜಯಮ್ಮ, ಜ್ಯೋತಿಲಕ್ಷ್ಮೀ, ಪದ್ಮಾ, ಸರೋಜ, ಗೀತಾ, ಲತಾ, ಮಂಜುಳಾ ಹಾಗೂ ಬಿಸಿಯೂಟ ತಯಾರಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT