ಆಗಸ್ಟ್ 1ರಂದು ಮಧ್ಯಾಹ್ನ 12ಕ್ಕೆ ಮಹಾತ್ಮ ಗಾಂಧಿ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ, ಉಪಾಧ್ಯಕ್ಷರಾದ ಎಸ್.ಎಸ್. ಗಣೇಶ್, ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಆವರಗೊಳ್ಳ ಪುರವರ್ಗದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿಯ ಹಿರೇಕಲ್ಮಠದ ಸ್ವಾಮೀಜಿ, ಹರಪನಹಳ್ಳಿ ತಗ್ಗಿನಮಠದ ಶ್ರೀಗಳು, ಚನ್ನಗಿರಿಯ ಕೇದಾರ ಲಿಂಗೇಶ್ವರ ಸ್ವಾಮೀಜಿ, ಹರಿಹರದ ಪುಣ್ಯಕೋಟಿ ಮಠದ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವರು’ ಎಂದು ತಿಳಿಸಿದರು.