ಎಲ್ಲ ಬಸ್ಗಳು ದಾವಣಗೆರೆಯಲ್ಲಿ ಮೂರ್ನಾಲ್ಕು ಕಡೆ, ಹರಿಹರದಲ್ಲಿ ಹೊನ್ನಾಳಿಯಲ್ಲಿ ಮೂರುಕಡೆ ನಿಲ್ಲಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತವೆ. ಬಸ್ನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಆದರೆ, ಮಲೇಬೆನ್ನೂರು ಪಟ್ಟಣದ ಮೂಲಕ ಸಂಚರಿಸುವ ವೇಗಧೂತ ಬಸ್ಗಳು ನಿಲುಗಡೆ ಮಾಡುವುದಿಲ್ಲ. ಬಸ್ ಖಾಲಿ ಹೋದರೂ ನಿಲ್ಲಿಸುವುದಿಲ್ಲ. ಇದರಿಂದ ವಿದ್ಯಾರ್ಥಿಗಳು, ನಾಗರಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.