ವರ್ತಕರ ಸಂಘದ ಕಾರ್ಯದರ್ಶಿ ಶಂಭುಲಿಂಗಪ್ಪ, ‘ಈಗ ನಮ್ಮಲ್ಲಿ ಲಭ್ಯವಿರುವ ದಾಸ್ತಾನು ಮೂರು ದಿನಗಳಿಗೆ ಸಾಕಾಗಲಿದ್ದು, ಬೇಳೆ, ಎಣ್ಣೆ ಮತ್ತು ಮಸಾಲೆ ಪದಾರ್ಥಗಳು ಹೊರಗಿನಿಂದ ಬರಬೇಕಿದೆ. ಅಲ್ಲಿಯೂ ಕಾರ್ಮಿಕರ ಕೊರತೆಯಿಂದ ಲಾರಿಗಳು ಓಡಾಡುತ್ತಿಲ್ಲ. ಇಲ್ಲಿ ಬರುವ ಲಾರಿ ಚಾಲಕರು ಹಾಗೂ ಕ್ಲೀನರ್ಗಳಿಗೆ ಊಟದ ಸಮಸ್ಯೆ ಇದೆ. ಹಾಗಾಗಿ ಅವರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದರು.