ಕಾಯಂ ವೇತನ ಇಲ್ಲದ ಖಾಸಗಿ ಶಾಲೆ, ಕಾಲೇಜುಗಳ 3 ಲಕ್ಷಕ್ಕೂ ಹೆಚ್ಚು ಶಿಕ್ಷಕರು, ಉಪನ್ಯಾಸಕರು, 50 ಸಾವಿರಕ್ಕೂ ಅಧಿಕ ಅತಿಥಿ ಶಿಕ್ಷಕರು, ಉಪನ್ಯಾಸಕರು ಬೀದಿಗೆ ಬೀಳುವ ಅಪಾಯದಲ್ಲಿ ಇದ್ದಾರೆ. ಅವರ ನೆರವಿಗೆ ಧಾವಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನುಣುಚಿಕೊಂಡಿವೆ. ಅವರ ಹೋರಾಟಕ್ಕೆ ಎಐಡಿಎಸ್ಒ ಬೆಂಬಲ ನೀಡುತ್ತದೆ ಎಂದು ಜಿಲ್ಲಾ ಅಧ್ಯಕ್ಷೆ ಸೌಮ್ಯಾ ಜೆ., ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.