<p><strong>ಚಿಕ್ಕಜಾಜೂರು:</strong> ತಾಲ್ಲೂಕಿನ ಪುಣ್ಯ ಕ್ಷೇತ್ರವಾದ ಕುಮ್ಮಿನಘಟ್ಟದ ಗುಡ್ಡದ ತಿಮ್ಮಪ್ಪ ಸ್ವಾಮಿಯ ದೇವಸ್ಥಾನದ ವಿಮಾನ ಗೋಪುರದ ಪುನರ್ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಡೆಸಲು ಭರದ ಸಿದ್ಧತೆಯನ್ನು ನಡೆಸಲಾಗಿದೆ.</p>.<p>ಫೆ. 9ರಂದು ದೇವತಾ ಕಾರ್ಯಗಳಿಗೆ ವಿವಿಧ ಗ್ರಾಮಗಳಿಂದ ದೇವರ ಮೂರ್ತಿಗಳು ಬರಲಿವೆ. ರಾತ್ರಿ ದೇವಸ್ಥಾನದಲ್ಲಿ ಕಳಸಾರೋಹಣ ನಿಮಿತ್ತ ದಾವಣಗೆರೆಯ ವೇದ ಬ್ರಹ್ಮ ಪವನ್ ಭಟ್ ಅವರಿಂದ ವಾಸ್ತು ಹೋಮ, ರಾಮೋಘ್ನ ಹೋಮ ಹಾಗೂ ದಿಗ್ಬಲಿ ಹವನಗಳನ್ನು ನಡೆಸಲಾಗುವುದು. ಫೆ. 10ರಂದು ಮುಂಜಾನೆ ಗಣ ಹೋಮ, ಮೂಲಮಂತ್ರ ಹೋಮವನ್ನು ನಡೆಸಿ, ಕಳಸಾರೋಹಣವನ್ನು ನಡೆಸಲಾಗುವುದು.</p>.<p>ಬೆಳಿಗ್ಗೆ 8.30ಕ್ಕೆ ಹೊಸದುರ್ಗದ ಕುಂಚಿಟಿಗ ಮಹಾ ಸಂಸ್ಥಾನದ ಡಾ. ಶಾಂತವೀರ ಮಹಾಸ್ವಾಮಿ ಅವರಿಂದ ಕಳಸಾರೋಹಣ ನಡೆಸಲಾಗುವುದು. ನಂತರ, ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ ಗುಡ್ಡದ ತಿಮ್ಮಪ್ಪ ಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ನಡೆಯಲಿದೆ.</p>.<p>ಭಕ್ತರು ತನು, ಮನ, ಧನಗಳೊಂದಿಗೆ ಸ್ವಾಮಿಯ ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿಯ ಸಂಚಾಲಕ, ಸದಸ್ಯರು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ತಾಲ್ಲೂಕಿನ ಪುಣ್ಯ ಕ್ಷೇತ್ರವಾದ ಕುಮ್ಮಿನಘಟ್ಟದ ಗುಡ್ಡದ ತಿಮ್ಮಪ್ಪ ಸ್ವಾಮಿಯ ದೇವಸ್ಥಾನದ ವಿಮಾನ ಗೋಪುರದ ಪುನರ್ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಡೆಸಲು ಭರದ ಸಿದ್ಧತೆಯನ್ನು ನಡೆಸಲಾಗಿದೆ.</p>.<p>ಫೆ. 9ರಂದು ದೇವತಾ ಕಾರ್ಯಗಳಿಗೆ ವಿವಿಧ ಗ್ರಾಮಗಳಿಂದ ದೇವರ ಮೂರ್ತಿಗಳು ಬರಲಿವೆ. ರಾತ್ರಿ ದೇವಸ್ಥಾನದಲ್ಲಿ ಕಳಸಾರೋಹಣ ನಿಮಿತ್ತ ದಾವಣಗೆರೆಯ ವೇದ ಬ್ರಹ್ಮ ಪವನ್ ಭಟ್ ಅವರಿಂದ ವಾಸ್ತು ಹೋಮ, ರಾಮೋಘ್ನ ಹೋಮ ಹಾಗೂ ದಿಗ್ಬಲಿ ಹವನಗಳನ್ನು ನಡೆಸಲಾಗುವುದು. ಫೆ. 10ರಂದು ಮುಂಜಾನೆ ಗಣ ಹೋಮ, ಮೂಲಮಂತ್ರ ಹೋಮವನ್ನು ನಡೆಸಿ, ಕಳಸಾರೋಹಣವನ್ನು ನಡೆಸಲಾಗುವುದು.</p>.<p>ಬೆಳಿಗ್ಗೆ 8.30ಕ್ಕೆ ಹೊಸದುರ್ಗದ ಕುಂಚಿಟಿಗ ಮಹಾ ಸಂಸ್ಥಾನದ ಡಾ. ಶಾಂತವೀರ ಮಹಾಸ್ವಾಮಿ ಅವರಿಂದ ಕಳಸಾರೋಹಣ ನಡೆಸಲಾಗುವುದು. ನಂತರ, ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ ಗುಡ್ಡದ ತಿಮ್ಮಪ್ಪ ಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ನಡೆಯಲಿದೆ.</p>.<p>ಭಕ್ತರು ತನು, ಮನ, ಧನಗಳೊಂದಿಗೆ ಸ್ವಾಮಿಯ ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿಯ ಸಂಚಾಲಕ, ಸದಸ್ಯರು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>