<p><strong>ಸಾಸ್ವೆಹಳ್ಳಿ:</strong> ಭದ್ರಾ ಕಾಲುವೆಯ ನೀರನ್ನು ರೈತರು ಅಕ್ರಮ ಪಂಪ್ಸೆಟ್ ಮೂಲಕ ಹೊಲ, ತೋಟ, ಗದ್ದೆಗಳಿಗೆ ಹರಿಸುತಿದ್ದು, ಇದರಿಂದ ನಾಲೆಯ ಕೊನೆ ಭಾಗಕ್ಕೆ ನೀರು ತಲುಪದ ಕಾರಣ ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೆ ಅಧಿಕಾರಗಳ ತಂಡ ಭದ್ರಾ ಕಾಲುವೆಯಲ್ಲಿದ್ದ ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸಿದರು.</p>.<p>ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್, ತಹಶೀಲ್ದಾರ್ ಪುರಂದರ ನೇತೃತ್ವದಲ್ಲಿ, ಪೊಲೀಸ್ ಭದ್ರತೆಯಲ್ಲಿ ಭದ್ರಾ ಕಾಲುವೆಗೆ ಅಕ್ರಮವಾಗಿ ಅಳವಡಿಸಿಕೊಂಡಿದ್ದ, ಪಂಪ್ಸೆಟ್ಗಳನ್ನು ಚನ್ನಮುಂಭಾಪುರ, ಹುಣಸಘಟ್ಟ, ಕ್ಯಾಸಿನಕೆರೆ, ಕುಳಗಟ್ಟೆ ಭದ್ರಾ ನಾಲೆಯಲ್ಲಿದ್ದ ಸುಮಾರು 200ಕ್ಕೂ ಹೆಚ್ಚು ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸಿದರು.</p>.<p>‘ನೀರನ್ನು ಮಿತವಾಗಿ ಬಳಸಬೇಕು. ಕೊನೆ ಭಾಗದ ಜನರಿಗೆ ನೀರು ತಲುಪದಿದ್ದರೆ ಆ ಭಾಗದ ಜನರಿಗೆ ತೊಂದರೆಯಾಗುತ್ತದೆ. ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ರೈತರು ಸಹಕಾರ ನೀಡಬೇಕು’ ಎಂದು ಶಾಸಕ ಡಿ.ಜಿ. ಶಾಂತನಗೌಡ ತೆರವು ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ರೈತರಲ್ಲಿ ಮನವಿ ಮಾಡಿದರು.</p>.<p>ಪಿಎಸ್ಐಗಳಾದ ಶಾಂತಲಾ, ನವೀನ್, ಸಾಸ್ವೆಹಳ್ಳಿ ಪೋಲಿಸ್ ಠಾಣೆಯ ಎಎಸ್ಐ ಹರೀಶ್, ಸಾಸ್ವೆಹಳ್ಳಿ ನೀರಾವರಿ ಇಲಾಖೆಯ ಎಇಇ ರಾಜಕುಮಾರ್, ಉಪ ತಹಶೀಲ್ದಾರ್ ಚಂದ್ರಪ್ಪ, ಆರ್.ಐ. ದಿನೇಶ್ ಬಾಬು, ಎಲ್ಲ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಭದ್ರಾ ಕಾಲುವೆಯ ನೀರನ್ನು ರೈತರು ಅಕ್ರಮ ಪಂಪ್ಸೆಟ್ ಮೂಲಕ ಹೊಲ, ತೋಟ, ಗದ್ದೆಗಳಿಗೆ ಹರಿಸುತಿದ್ದು, ಇದರಿಂದ ನಾಲೆಯ ಕೊನೆ ಭಾಗಕ್ಕೆ ನೀರು ತಲುಪದ ಕಾರಣ ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೆ ಅಧಿಕಾರಗಳ ತಂಡ ಭದ್ರಾ ಕಾಲುವೆಯಲ್ಲಿದ್ದ ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸಿದರು.</p>.<p>ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್, ತಹಶೀಲ್ದಾರ್ ಪುರಂದರ ನೇತೃತ್ವದಲ್ಲಿ, ಪೊಲೀಸ್ ಭದ್ರತೆಯಲ್ಲಿ ಭದ್ರಾ ಕಾಲುವೆಗೆ ಅಕ್ರಮವಾಗಿ ಅಳವಡಿಸಿಕೊಂಡಿದ್ದ, ಪಂಪ್ಸೆಟ್ಗಳನ್ನು ಚನ್ನಮುಂಭಾಪುರ, ಹುಣಸಘಟ್ಟ, ಕ್ಯಾಸಿನಕೆರೆ, ಕುಳಗಟ್ಟೆ ಭದ್ರಾ ನಾಲೆಯಲ್ಲಿದ್ದ ಸುಮಾರು 200ಕ್ಕೂ ಹೆಚ್ಚು ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸಿದರು.</p>.<p>‘ನೀರನ್ನು ಮಿತವಾಗಿ ಬಳಸಬೇಕು. ಕೊನೆ ಭಾಗದ ಜನರಿಗೆ ನೀರು ತಲುಪದಿದ್ದರೆ ಆ ಭಾಗದ ಜನರಿಗೆ ತೊಂದರೆಯಾಗುತ್ತದೆ. ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ರೈತರು ಸಹಕಾರ ನೀಡಬೇಕು’ ಎಂದು ಶಾಸಕ ಡಿ.ಜಿ. ಶಾಂತನಗೌಡ ತೆರವು ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ರೈತರಲ್ಲಿ ಮನವಿ ಮಾಡಿದರು.</p>.<p>ಪಿಎಸ್ಐಗಳಾದ ಶಾಂತಲಾ, ನವೀನ್, ಸಾಸ್ವೆಹಳ್ಳಿ ಪೋಲಿಸ್ ಠಾಣೆಯ ಎಎಸ್ಐ ಹರೀಶ್, ಸಾಸ್ವೆಹಳ್ಳಿ ನೀರಾವರಿ ಇಲಾಖೆಯ ಎಇಇ ರಾಜಕುಮಾರ್, ಉಪ ತಹಶೀಲ್ದಾರ್ ಚಂದ್ರಪ್ಪ, ಆರ್.ಐ. ದಿನೇಶ್ ಬಾಬು, ಎಲ್ಲ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>