<p><strong>ದಾವಣಗೆರೆ: </strong>ನಗರದ ಎಸ್.ಎಂ. ಕೃಷ್ಣನಗರದ ನಿವಾಸಿ ರವಿಕುಮಾರ ಜಿ. (32) ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ ನಿಧನರಾದರು.</p>.<p>ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಇವರು ಕೆ.ಆರ್. ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರಿಂದ ಇವರು ‘ಮಾರ್ಕೆಟ್ ರವಿ’ ಎಂದೇ ಪರಿಚಿತರಾಗಿದ್ದರು.</p>.<p>ನಟ ಪುನೀತ್ ರಾಜಕುಮಾರ್ ನಿಧನರಾದ ನಂತರ ಅವರಿಂದ ಪ್ರೇರಣೆ ಪಡೆದು ನೇತ್ರದಾನ ಮಾಡುವುದಾಗಿ ರವಿ ನೋಂದಣಿ ಮಾಡಿಸಿದ್ದರು. ಅದರಂತೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಅವರ ಕಣ್ಣುಗಳನ್ನು ದಾನ ಮಾಡಲಾಯಿತು.</p>.<p>ಕನ್ನಡ ರಾಜ್ಯೋತ್ಸವ ಹಾಗೂ ಅಪ್ಪು ಜನ್ಮದಿನದಂದು ಜೂನಿಯರ್ ಪುನೀತ್ ರಾಜಕುಮಾರ್ ಅವರನ್ನು ಕರೆಸಿ ಆಚರಣೆ ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರೂ ಆಗಿದ್ದರು.</p>.<p>‘ರವಿಗೆ 9 ತಿಂಗಳ ಮಗು ಇದ್ದು, ಆ ಮಗುವನ್ನು ಕುಟುಂಬದವರು ಪ್ರೀತಿಯಿಂದ ‘ಅಪ್ಪು’ ಎಂದು ಕರೆಯುತ್ತಿದ್ದರು. ಹಲವು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಕೊಂಡಿದ್ದ’ ಎಂದು ಮೃತರ ಸಹೋದರ ವೆಂಕಟೇಶ್ ತಿಳಿಸಿದರು.</p>.<p>ಮೃತರಿಗೆ ನಾಲ್ವರು ಸಹೋದರರು, ಮೂವರು ಸಹೋದರಿಯರು ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಬಾಡದಲ್ಲಿ ಬುಧವಾರ ನೆರವೇರಿತು.</p>.<p>ಬಿಜೆಪಿ ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ ದಾಸಕರಿಯಪ್ಪ ಅವರು ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದ ಎಸ್.ಎಂ. ಕೃಷ್ಣನಗರದ ನಿವಾಸಿ ರವಿಕುಮಾರ ಜಿ. (32) ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ ನಿಧನರಾದರು.</p>.<p>ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಇವರು ಕೆ.ಆರ್. ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರಿಂದ ಇವರು ‘ಮಾರ್ಕೆಟ್ ರವಿ’ ಎಂದೇ ಪರಿಚಿತರಾಗಿದ್ದರು.</p>.<p>ನಟ ಪುನೀತ್ ರಾಜಕುಮಾರ್ ನಿಧನರಾದ ನಂತರ ಅವರಿಂದ ಪ್ರೇರಣೆ ಪಡೆದು ನೇತ್ರದಾನ ಮಾಡುವುದಾಗಿ ರವಿ ನೋಂದಣಿ ಮಾಡಿಸಿದ್ದರು. ಅದರಂತೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಅವರ ಕಣ್ಣುಗಳನ್ನು ದಾನ ಮಾಡಲಾಯಿತು.</p>.<p>ಕನ್ನಡ ರಾಜ್ಯೋತ್ಸವ ಹಾಗೂ ಅಪ್ಪು ಜನ್ಮದಿನದಂದು ಜೂನಿಯರ್ ಪುನೀತ್ ರಾಜಕುಮಾರ್ ಅವರನ್ನು ಕರೆಸಿ ಆಚರಣೆ ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರೂ ಆಗಿದ್ದರು.</p>.<p>‘ರವಿಗೆ 9 ತಿಂಗಳ ಮಗು ಇದ್ದು, ಆ ಮಗುವನ್ನು ಕುಟುಂಬದವರು ಪ್ರೀತಿಯಿಂದ ‘ಅಪ್ಪು’ ಎಂದು ಕರೆಯುತ್ತಿದ್ದರು. ಹಲವು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಕೊಂಡಿದ್ದ’ ಎಂದು ಮೃತರ ಸಹೋದರ ವೆಂಕಟೇಶ್ ತಿಳಿಸಿದರು.</p>.<p>ಮೃತರಿಗೆ ನಾಲ್ವರು ಸಹೋದರರು, ಮೂವರು ಸಹೋದರಿಯರು ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಬಾಡದಲ್ಲಿ ಬುಧವಾರ ನೆರವೇರಿತು.</p>.<p>ಬಿಜೆಪಿ ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ ದಾಸಕರಿಯಪ್ಪ ಅವರು ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>