‘ತುಂಗಭದ್ರಾ ಸೇತುವೆ ದಾಟುವ ಸಂಕಷ್ಟ’ ಎಂಬ ಶೀರ್ಷಿಕೆಯಡಿ ಮೇ 14ರಂದು ‘ಪ್ರಜಾವಾಣಿ’ಯಲ್ಲಿ ಸಮಗ್ರ ವರದಿ ಪ್ರಕಟವಾಗಿತ್ತು. ಸೇತುವೆಯ ಮೇಲೆ ಮಳೆ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದರಿಂದ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಮರುದಿನವೇ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದರು. ಸಿಬ್ಬಂದಿ ಮೂಲಕ 34 ಕಿಂಡಿಗಳನ್ನು ತೆರವುಗೊಳಿಸಿ, ಸೇತುವೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ತೆರವುಗೊಳಿಸಿದ್ದರು.