ದಾವಣಗೆರೆ ಎಪಿಎಂಸಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ‘ಬೋರ್ಡ್ ಸದಸ್ಯರು 4–5 ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು ಅಭಿಪ್ರಾಯ ತಿಳಿಸಿದರೆ ವಕೀಲ ಶಿವಪ್ರಕಾಶ್ ಸಲಹೆ ಪಡೆದು ವಿಧಾನಸಭಾ ಅಧಿವೇಶನಕ್ಕೂ ಮುನ್ನ ರಿಟ್ ಅರ್ಜಿ ಸಲ್ಲಿಸಲಾಗುವುದು. ಅದರ ಪ್ರತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವರಿಗೆ ನೀಡಿ ಎಪಿಎಂಸಿಯನ್ನು ಉಳಿಸಲು ಮನವಿ ಮಾಡಲಾಗುವುದು’ ಎಂದು ಹೇಳಿದರು.