<p><strong>ಸಾಸ್ವೆಹಳ್ಳಿ</strong>: ಹೋಬಳಿಯಲ್ಲಿ ಯೂರಿಯಾ ಗೊಬ್ಬರದ ದಾಸ್ತಾನನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಕೊರತೆಯನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ತಲಾ ಎರಡು ಚೀಲಗಳಿಗೆ ಮಾತ್ರ ಗೊಬ್ಬರ ವಿತರಿಸಲು ಸೂಚಿಸಲಾಗಿದೆ.</p>.<p>ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಆದೇಶದ ಮೇರೆಗೆ ಗುರುವಾರ ಸಂಜೆ ಹೊನ್ನಾಳಿಯ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಸಭೆ ಕರೆದು, ಸ್ಥಳೀಯ ಅಧಿಕಾರಿಗಳು ತಕ್ಷಣವೇ ಗೊಬ್ಬರದ ಅಂಗಡಿಗಳಿಗೆ ಭೇಟಿ ನೀಡಿ ದಾಸ್ತಾನು ಪರಿಶೀಲಿಸುವಂತೆ ಸೂಚಿಸಿದರು.</p>.<p>ಹೋಬಳಿಯ ಎಲ್ಲಾ ಗೊಬ್ಬರದ ಅಂಗಡಿಗಳಿಗೂ ಭೇಟಿ ನೀಡಿ, ಗೊಬ್ಬರದ ಮಾಲೀಕರಿಗೆ ದಾಸ್ತಾನು ಕಡಿಮೆ ಇರುವುದರಿಂದ ಅವಶ್ಯಕತೆ ಇರುವ ರೈತರಿಗೆ ಆಧಾರ್ ಕಾರ್ಡ್ ಪಡೆದು, ಕೇವಲ ಎರಡು ಚೀಲ ಯೂರಿಯಾ ಗೊಬ್ಬರವನ್ನು ನೀಡಬೇಕು. ಯಾವುದೇ ರೀತಿಯ ಹೆಚ್ಚುವರಿ ಹಣ ಪಡೆಯದೆ ಈ ಗೊಬ್ಬರವನ್ನು ಎಲ್ಲಾ ರೈತರಿಗೂ ಸಿಗುವಂತೆ ವಿತರಿಸಬೇಕು ಎಂದು ಸೂಚಿಸಿದರು.</p>.<p>ಸಾಸ್ವೆಹಳ್ಳಿ ಕೃಷಿ ಅಧಿಕಾರಿ ಸಿ.ಯು.ಶಶಿಧರ್, ಉಪ ತಹಶೀಲ್ದಾರ್ ಚಂದ್ರಪ್ಪ, ಆರ್.ಐ. ದಿನೇಶ್ ಬಾಬು, ಗ್ರಾಮ ಲೆಕ್ಕಾಧಿಕಾರಿ ಸಂತೋಷ್, ಪೊಲೀಸ್ ಸಿಬ್ಬಂದಿ ಸಿದ್ದಪ್ಪ, ಮಂಜುನಾಥ್ ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ಹೋಬಳಿಯಲ್ಲಿ ಯೂರಿಯಾ ಗೊಬ್ಬರದ ದಾಸ್ತಾನನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಕೊರತೆಯನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ತಲಾ ಎರಡು ಚೀಲಗಳಿಗೆ ಮಾತ್ರ ಗೊಬ್ಬರ ವಿತರಿಸಲು ಸೂಚಿಸಲಾಗಿದೆ.</p>.<p>ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಆದೇಶದ ಮೇರೆಗೆ ಗುರುವಾರ ಸಂಜೆ ಹೊನ್ನಾಳಿಯ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಸಭೆ ಕರೆದು, ಸ್ಥಳೀಯ ಅಧಿಕಾರಿಗಳು ತಕ್ಷಣವೇ ಗೊಬ್ಬರದ ಅಂಗಡಿಗಳಿಗೆ ಭೇಟಿ ನೀಡಿ ದಾಸ್ತಾನು ಪರಿಶೀಲಿಸುವಂತೆ ಸೂಚಿಸಿದರು.</p>.<p>ಹೋಬಳಿಯ ಎಲ್ಲಾ ಗೊಬ್ಬರದ ಅಂಗಡಿಗಳಿಗೂ ಭೇಟಿ ನೀಡಿ, ಗೊಬ್ಬರದ ಮಾಲೀಕರಿಗೆ ದಾಸ್ತಾನು ಕಡಿಮೆ ಇರುವುದರಿಂದ ಅವಶ್ಯಕತೆ ಇರುವ ರೈತರಿಗೆ ಆಧಾರ್ ಕಾರ್ಡ್ ಪಡೆದು, ಕೇವಲ ಎರಡು ಚೀಲ ಯೂರಿಯಾ ಗೊಬ್ಬರವನ್ನು ನೀಡಬೇಕು. ಯಾವುದೇ ರೀತಿಯ ಹೆಚ್ಚುವರಿ ಹಣ ಪಡೆಯದೆ ಈ ಗೊಬ್ಬರವನ್ನು ಎಲ್ಲಾ ರೈತರಿಗೂ ಸಿಗುವಂತೆ ವಿತರಿಸಬೇಕು ಎಂದು ಸೂಚಿಸಿದರು.</p>.<p>ಸಾಸ್ವೆಹಳ್ಳಿ ಕೃಷಿ ಅಧಿಕಾರಿ ಸಿ.ಯು.ಶಶಿಧರ್, ಉಪ ತಹಶೀಲ್ದಾರ್ ಚಂದ್ರಪ್ಪ, ಆರ್.ಐ. ದಿನೇಶ್ ಬಾಬು, ಗ್ರಾಮ ಲೆಕ್ಕಾಧಿಕಾರಿ ಸಂತೋಷ್, ಪೊಲೀಸ್ ಸಿಬ್ಬಂದಿ ಸಿದ್ದಪ್ಪ, ಮಂಜುನಾಥ್ ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>