<p><strong>ದಾವಣಗೆರೆ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಉತ್ತಮ ಮಳೆಯಾಗಿದೆ. ನಗರದಲ್ಲಿ ಸಂಜೆ 4.30ಕ್ಕೆ ಆರಂಭವಾದ ಮಳೆ ಒಂದು ಗಂಟೆ ಕಾಲ ರಭಸದಿಂದಲೇ ಸುರಿಯಿತು.</p>.<p>ನಗರ ಹಾಗೂ ನಗರದ ಹೊರವಲಯದಲ್ಲಿ ಸಂಜೆ ಮಳೆಯಾಗಿದ್ದು, ಶಾಲೆ ಬಿಡುವ ವೇಳೆಯಾಗಿದ್ದರಿಂದ ವಿದ್ಯಾರ್ಥಿಗಳು ಮಳೆಯಲ್ಲೇ ತೊಯ್ದು ಬರಬೇಕಾಯಿತು. ವಿದ್ಯಾರ್ಥಿಗಳು ಮಳೆಯನ್ನು ಆಸ್ವಾದಿಸಿದರು. ಕೆಲ ಬಡಾವಣೆಯಲ್ಲಿ ರಸ್ತೆಯಲ್ಲಿ ನೀರು ಹರಿಯಿತು.</p>.<p>ಒಂದು ವಾರ ಬಿಡುವು ನೀಡಿದ್ದ ಮಳೆ ಈಗ ಜೋರಾಗಿ ಸುರಿದಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಸಜ್ಜಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಉತ್ತಮ ಮಳೆಯಾಗಿದೆ. ನಗರದಲ್ಲಿ ಸಂಜೆ 4.30ಕ್ಕೆ ಆರಂಭವಾದ ಮಳೆ ಒಂದು ಗಂಟೆ ಕಾಲ ರಭಸದಿಂದಲೇ ಸುರಿಯಿತು.</p>.<p>ನಗರ ಹಾಗೂ ನಗರದ ಹೊರವಲಯದಲ್ಲಿ ಸಂಜೆ ಮಳೆಯಾಗಿದ್ದು, ಶಾಲೆ ಬಿಡುವ ವೇಳೆಯಾಗಿದ್ದರಿಂದ ವಿದ್ಯಾರ್ಥಿಗಳು ಮಳೆಯಲ್ಲೇ ತೊಯ್ದು ಬರಬೇಕಾಯಿತು. ವಿದ್ಯಾರ್ಥಿಗಳು ಮಳೆಯನ್ನು ಆಸ್ವಾದಿಸಿದರು. ಕೆಲ ಬಡಾವಣೆಯಲ್ಲಿ ರಸ್ತೆಯಲ್ಲಿ ನೀರು ಹರಿಯಿತು.</p>.<p>ಒಂದು ವಾರ ಬಿಡುವು ನೀಡಿದ್ದ ಮಳೆ ಈಗ ಜೋರಾಗಿ ಸುರಿದಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಸಜ್ಜಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>