<p><strong>ದಾವಣಗೆರೆ</strong>: ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜಿಟಿಜಿಟಿ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆಯಿಂದಲೂ ಮೋಡಕವಿದ ವಾತಾವರಣವಿತ್ತು. ಆಗಾಗ ತುಂತುರು ಮಳೆಯೂ ಸುರಿಯಿತು. ನಗರದಲ್ಲಿ ಸಂಜೆ 4ಕ್ಕೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸು ಪಡೆಯಿತು. ಸಂಜೆಯವರೆಗೂ ಸಣ್ಣ ಪ್ರಮಾಣದಲ್ಲಿ ಸುರಿಯಿತು.</p><p>ಹರಿಹರ, ಜಗಳೂರು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ, ಸಂತೇಬೆನ್ನೂರು ಭಾಗಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಕೆಲವೆಡೆ ಮೆಕ್ಕೆಜೋಳ ಬಿತ್ತನೆಯಾಗಿದ್ದರೆ, ಕೆಲವು ಕಡೆ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜಿಟಿಜಿಟಿ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆಯಿಂದಲೂ ಮೋಡಕವಿದ ವಾತಾವರಣವಿತ್ತು. ಆಗಾಗ ತುಂತುರು ಮಳೆಯೂ ಸುರಿಯಿತು. ನಗರದಲ್ಲಿ ಸಂಜೆ 4ಕ್ಕೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸು ಪಡೆಯಿತು. ಸಂಜೆಯವರೆಗೂ ಸಣ್ಣ ಪ್ರಮಾಣದಲ್ಲಿ ಸುರಿಯಿತು.</p><p>ಹರಿಹರ, ಜಗಳೂರು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ, ಸಂತೇಬೆನ್ನೂರು ಭಾಗಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಕೆಲವೆಡೆ ಮೆಕ್ಕೆಜೋಳ ಬಿತ್ತನೆಯಾಗಿದ್ದರೆ, ಕೆಲವು ಕಡೆ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>