<p><strong>ನ್ಯಾಮತಿ: </strong>ಕಳೆದ ಒಂದು ವಾರದಿಂದ ಅವಳಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಅತಿವೃಷ್ಟಿಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುವುದಾಗಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.</p>.<p>ತಾಲ್ಲೂಕಿನ ಸೋಗಿಲು, ಚಟ್ನಳ್ಳಿ, ಗಂಜೇನಹಳ್ಳಿ, ಫಲವನಹಳ್ಳಿ, ಕುಂಕುವಾ, ಒಡೆಯರಹತ್ತೂರು, ಗಂಗನಕೋಟೆ, ಕಂಕನಹಳ್ಳಿ, ಕೊಡಚಗೊಂಡನಹಳ್ಳಿ, ದಾನಿಹಳ್ಳಿ, ಆರುಂಡಿ, ರಾಮೇಶ್ವರ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಹಿರೇಹಳ್ಳ ತುಂಬಿರುವುದರಿಂದ ಗಂಜೇನಹಳ್ಳಿ-ಸಾಲಬಾಳು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲು ಅಂದಾಜುವೆಚ್ಚದ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಪತಹಶೀಲ್ದಾರ್ ಎನ್. ನಾಗರಾಜ, ಆರ್ಐ ಸುಧೀರ್, ಕೆಎಸ್ಡಿಎಲ್ ನಿರ್ದೇಶಕ ಶಿವು ಹುಡೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ: </strong>ಕಳೆದ ಒಂದು ವಾರದಿಂದ ಅವಳಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಅತಿವೃಷ್ಟಿಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುವುದಾಗಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.</p>.<p>ತಾಲ್ಲೂಕಿನ ಸೋಗಿಲು, ಚಟ್ನಳ್ಳಿ, ಗಂಜೇನಹಳ್ಳಿ, ಫಲವನಹಳ್ಳಿ, ಕುಂಕುವಾ, ಒಡೆಯರಹತ್ತೂರು, ಗಂಗನಕೋಟೆ, ಕಂಕನಹಳ್ಳಿ, ಕೊಡಚಗೊಂಡನಹಳ್ಳಿ, ದಾನಿಹಳ್ಳಿ, ಆರುಂಡಿ, ರಾಮೇಶ್ವರ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಹಿರೇಹಳ್ಳ ತುಂಬಿರುವುದರಿಂದ ಗಂಜೇನಹಳ್ಳಿ-ಸಾಲಬಾಳು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲು ಅಂದಾಜುವೆಚ್ಚದ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಪತಹಶೀಲ್ದಾರ್ ಎನ್. ನಾಗರಾಜ, ಆರ್ಐ ಸುಧೀರ್, ಕೆಎಸ್ಡಿಎಲ್ ನಿರ್ದೇಶಕ ಶಿವು ಹುಡೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>