ಶುಕ್ರವಾರ, ಮಾರ್ಚ್ 24, 2023
22 °C

ಹರಪನಹಳ್ಳಿ: ಕೃಷಿ ಹೊಂಡಕ್ಕೆ ನೀರು- ಸಸಿ ನೆಟ್ಟು ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ತಾಲ್ಲೂಕಿನ ಬಾಗಳಿ ಗ್ರಾಮದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡ ಭರ್ತಿಯಾಗಿದ್ದರಿಂದ ಗ್ರಾಮದ ಯುವಕರು ಒಂದೇ ಬಣ್ಣದ ಟೀಶರ್ಟ್ ಧರಿಸಿ ಗಂಗಾಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು.

ಗ್ರಾಮದ ಎನ್. ಸಿದ್ದಲಿಂಗಪ್ಪ ಅವರ ಜಮೀನಿನಲ್ಲಿ ಕಳೆದ ತಿಂಗಳು ಕೃಷಿ ಹೊಂಡ ನಿರ್ಮಾಣ ಮಾಡಿದ್ದರು. ಹೆಚ್ಚಿನ ಮಳೆ ಸುರಿದಿದ್ದರಿಂದ ಸೋಮವಾರ ಹೊಂಡದಲ್ಲಿ ಉತ್ತಮ ನೀರು ಸಂಗ್ರಹವಾಗಿತ್ತು. ಇದರಿಂದ ಖುಷಿಗೊಂಡ ರೈತರು, ಜಮೀನಿಗೆ ತೆರಳಿ, ಹೊಂಡದ ಸುತ್ತಲೂ ಗಿಡಗಳನ್ನು ನೆಟ್ಟು ಪೂಜೆ ನೆರವೇರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಕೃಷಿ ಸಹಾಯಕ ಉತ್ತಂಗಿ ಮಂಜುನಾಥ್ ಮಾತನಾಡಿ, ‘ರೈತರು ವೈಜ್ಞಾನಿಕ ಕೃಷಿಯತ್ತ ಗಮನ ಹರಿಸುತ್ತಿದ್ದಾರೆ. ಹೊಂಡದಲ್ಲಿ ಸಂಗ್ರಹವಾಗುವ ನೀರನ್ನು ಮಳೆ ಕೊರತೆ ಆದಾಗ ಪಂಪ್‌ಸೆಟ್‌ ಬಳಸಿ ಬೆಳೆಗೆ ಹರಿಸಲು ಸಹಕಾರಿ ಆಗುತ್ತದೆ. ಇದರಿಂದ ರೈತರಿಗೆ ಆಗುವ ನಷ್ಟವನ್ನು ತಪ್ಪಿಸಬಹುದು’ ಎಂದರು.

ರೈತ ಎನ್.ಜಿ. ಸಿದ್ದೇಶ್ ಮಾತನಾಡಿ, ‘ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದಲೇ ಕೃಷಿ ಹೊಂಡ ನಿರ್ಮಿಸಲಾಗಿದೆ’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್.ಮಂಜುನಾಥ್, ಬಣಕಾರ ಜಗದೀಶ್, ಎಚ್.ದ್ವಾರಕೀಶ್, ಎನ್. ಕೊಟ್ರೇಶ್, ಸಿದ್ದಲಿಂಗಪ್ಪ, ಟಿ.ಎಸ್. ಕರಿಯಪ್ಪ, ಅಂಜಿನಪ್ಪ, ಹಾಲೇಶ್, ಎಚ್.ಬಿ. ಮಂಜುನಾಥ್, ನಿರಂಜನ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು