ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹಾವನೂರು ತಿಪ್ಪೇಶ್ ಅವರ ಮನೆ ಮೇಲೆ ಮರ ಉರುಳಿ ಬಿದ್ದಿದೆ. ಮರದ ಸಮೀಪ ವಿದ್ಯುತ್ ತಂತಿ ಹಾದು ಹೋಗಿದ್ದು, ವಿದ್ಯುತ್ ತಂತಿ ಮರವನ್ನು ತಡೆಹಿಡಿದಿದ್ದರಿಂದ ಮನೆಗೆ ದೊಡ್ಡ ಹಾನಿಯಾಗಿಲ್ಲ. ಹಲವು ಹೆಂಚುಗಳು ಮುರಿದಿವೆ. ವಿದ್ಯುತ್ ತಂತಿ ಮೇಲೆ ಮರ ಉರುಳಿದ ಪ್ರಯುಕ್ತ ತಡರಾತ್ರಿವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.