ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಮಳೆಗೆ ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ: ರೈತರಿಗೆ NDRF ‘ಮಾರ್ಗಸೂಚಿ’ ಕಂಟಕ

Published : 22 ಮೇ 2025, 20:21 IST
Last Updated : 22 ಮೇ 2025, 20:21 IST
ಫಾಲೋ ಮಾಡಿ
Comments
ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ದೇವರಬೆಳಕೆರೆ ಸಮೀಪದ ರೈತರೊಬ್ಬರ ಜಮೀನಿನಲ್ಲಿ ಭತ್ತದ ಬೆಳೆ ಚಾಪೆ ಹಾಸಿರುವುದು

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ದೇವರಬೆಳಕೆರೆ ಸಮೀಪದ ರೈತರೊಬ್ಬರ ಜಮೀನಿನಲ್ಲಿ ಭತ್ತದ ಬೆಳೆ ಚಾಪೆ ಹಾಸಿರುವುದು

ಪ್ರಜಾವಾಣಿ ಚಿತ್ರ

ಕನಿಷ್ಠ ಶೇ 33ರಷ್ಟು ಹಾನಿಯಾದರೆ ಮಾತ್ರ ಪರಿಹಾರ ನೀಡಬೇಕೆಂಬ ಮಾನದಂಡದಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಎನ್‌ಡಿಆರ್‌ಎಫ್‌ ಎಸ್‌ಡಿಆರ್‌ಎಫ್‌ ಮಾನದಂಡ ಬದಲಾವಣೆಗೆ ಸರ್ಕಾರದ ಗಮನ‌ಕ್ಕೆ ತಂದರೂ ಪ್ರಯೋಜನವಾಗಿಲ್ಲ.
– ತೇಜಸ್ವಿ ಪಟೇಲ್, ರೈತ ಮುಖಂಡ
ಭತ್ತ; ಕಟಾವಿನ ನಂತರವೂ ಸಮಸ್ಯೆ
ಮಳೆಯಿಂದಾಗಿ ಕಟಾವು ಮಾಡಿದ ಭತ್ತವನ್ನು ಉಳಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ. ಭತ್ತವು ತೇವಾಂಶ ಹೊಂದಿರುವ ಕಾರಣಕ್ಕೆ ಮಾರಾಟ ಮಾಡಲೂ ಆಗುತ್ತಿಲ್ಲ. ಬಿಸಿಲಿಗೆ ಒಣಗಿಸಲು ವರುಣ ಬಿಡುತ್ತಿಲ್ಲ. ಹೀಗಾಗಿ ಎಲ್ಲೆಂದರಲ್ಲಿ ಭತ್ತವನ್ನು ರಾಶಿ ಮಾಡಿ ಮೇಲೆ ತಾಡಪಲ್‌ ಹೊದಿಸುವುದು ರೈತರಿಗೆ ಅನಿವಾರ್ಯವಾಗಿದೆ. ಕೆಲವೆಡೆ ರಾಶಿ ಮಾಡಿದ ಭತ್ತವು ತೀವ್ರ ತೇವಾಂಶದಿಂದಾಗಿ ಮೊಳಕೆಯೊಡೆದು ಹಾಳಾಗುತ್ತಿದೆ. ಇದರಿಂದಲೂ ರೈತರಿಗೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದೆ. ಭತ್ತದ ಕಟಾವು ಮುಗಿಸಿರುವ ರೈತರು ಹಾಳಾಗುತ್ತಿರುವ ಮೇವನ್ನು ಉಳಿಸಿಕೊಳ್ಳುವ ಸವಾಲನ್ನೂ ಎದುರಿಸುತ್ತಿದ್ದಾರೆ. ಕಟಾವಿನ ನಂತರದ ಹಾನಿಯನ್ನೂ ಪರಿಹಾರಕ್ಕೆ ಪರಿಗಣಿಸಬೇಕು ಎಂಬುದೂ ರೈತರ ಕೋರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT