<p><strong>ದಾವಣಗೆರೆ</strong>: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ.</p>.<p>ಭಾನುವಾರ ಮಧ್ಯಾಹ್ನವೂ ಮಳೆ ಸುರಿಯಿತು. ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಇದರಿಂದಾಗಿ ಸಾರ್ವಜನಿಕರು, ಬೈಕ್ ಸವಾರರು ಸಂಚರಿಸಲು ಹರಸಾಹಸಪಡಬೇಕಾಯಿತು.</p>.<p>ದಾವಣಗೆರೆ ತಾಲ್ಲೂಕಿನ ಕಾಡಜ್ಜಿಯಲ್ಲಿ ಭಾನುವಾರ 3 ಸೆಂ.ಮೀ, ಅಣಜಿಯಲ್ಲಿ 1 ಸೆಂ.ಮೀ, ಮಾಯಕೊಂಡದಲ್ಲಿ ಒಂದು ಸೆಂ.ಮೀ ಸೇರಿದಂತೆ ಒಟ್ಟು 7 ಸೆಂ.ಮೀ ಮಳೆಯಾಗಿದೆ. </p>.<p><strong>ಮಳೆಗೆ ಭತ್ತದ ಬೆಳೆ ನಾಶ</strong></p>.<p>ಶನಿವಾರ ರಾತ್ರಿ ಸುರಿದ ಗಾಳಿ ಮಳೆಗೆ ದೊಡ್ಡಬಾತಿಯ ಹಲವು ಗದ್ದೆಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆಯು ಛಾಪೆ ಹಾಸಿದಂತಾಗಿದೆ. ಗ್ರಾಮದ ಉಮೇಶ್ ಅವರ ಒಂದುವರೆ ಎಕರೆ ಪ್ರದೇಶದಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ.</p>.<p>‘ಬಡ್ಡಿ ಸಾಲ ಮಾಡಿ ₹ 50 ಸಾವಿರ ಖರ್ಚು ಮಾಡಿ ಭತ್ತ ಬೆಳೆದಿದ್ದೇನೆ. ಬೆಳೆ ನಾಶವಾಗಿದೆ. ಅಧಿಕಾರಿಗಳು ಈವರೆಗೆ ಯಾರೂ ಬಂದಿಲ್ಲ. ರೈತರ ಕಷ್ಟ ಕೇಳುವವರು ಇಲ್ಲವಾಗಿದ್ದಾರೆ’ ಎಂದು ಉಮೇಶ್ ಅಳವಲು ತೋಡಿಕೊಂಡರು.</p>.<p>ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ 8.30ರ ವೇಳೆಗೆ ವಾಡಿಕೆ ಮಳೆ 2.8 ಮಿ.ಮೀಗೆ ಸರಾಸರಿ 6 ಮಿ.ಮೀ ಮಳೆಯಾಗಿದೆ. ಚನ್ನಗಿರಿಯಲ್ಲಿ 8, ದಾವಣಗೆರೆ ತಾಲ್ಲೂಕಿನಲ್ಲಿ 7.7 ಮಿ.ಮೀ, ಹರಿಹರದಲ್ಲಿ 3.8 ಮಿ.ಮೀ, ಹೊನ್ನಾಳಿಯಲ್ಲಿ 8.5 ಮಿ.ಮೀ, ಜಗಳೂರಿನಲ್ಲಿ 1 ಮಿ.ಮೀ. ಹಾಗೂ ನ್ಯಾಮತಿಯಲ್ಲಿ ಸರಾಸರಿ 7.4 ಮಿ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ.</p>.<p>ಭಾನುವಾರ ಮಧ್ಯಾಹ್ನವೂ ಮಳೆ ಸುರಿಯಿತು. ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಇದರಿಂದಾಗಿ ಸಾರ್ವಜನಿಕರು, ಬೈಕ್ ಸವಾರರು ಸಂಚರಿಸಲು ಹರಸಾಹಸಪಡಬೇಕಾಯಿತು.</p>.<p>ದಾವಣಗೆರೆ ತಾಲ್ಲೂಕಿನ ಕಾಡಜ್ಜಿಯಲ್ಲಿ ಭಾನುವಾರ 3 ಸೆಂ.ಮೀ, ಅಣಜಿಯಲ್ಲಿ 1 ಸೆಂ.ಮೀ, ಮಾಯಕೊಂಡದಲ್ಲಿ ಒಂದು ಸೆಂ.ಮೀ ಸೇರಿದಂತೆ ಒಟ್ಟು 7 ಸೆಂ.ಮೀ ಮಳೆಯಾಗಿದೆ. </p>.<p><strong>ಮಳೆಗೆ ಭತ್ತದ ಬೆಳೆ ನಾಶ</strong></p>.<p>ಶನಿವಾರ ರಾತ್ರಿ ಸುರಿದ ಗಾಳಿ ಮಳೆಗೆ ದೊಡ್ಡಬಾತಿಯ ಹಲವು ಗದ್ದೆಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆಯು ಛಾಪೆ ಹಾಸಿದಂತಾಗಿದೆ. ಗ್ರಾಮದ ಉಮೇಶ್ ಅವರ ಒಂದುವರೆ ಎಕರೆ ಪ್ರದೇಶದಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ.</p>.<p>‘ಬಡ್ಡಿ ಸಾಲ ಮಾಡಿ ₹ 50 ಸಾವಿರ ಖರ್ಚು ಮಾಡಿ ಭತ್ತ ಬೆಳೆದಿದ್ದೇನೆ. ಬೆಳೆ ನಾಶವಾಗಿದೆ. ಅಧಿಕಾರಿಗಳು ಈವರೆಗೆ ಯಾರೂ ಬಂದಿಲ್ಲ. ರೈತರ ಕಷ್ಟ ಕೇಳುವವರು ಇಲ್ಲವಾಗಿದ್ದಾರೆ’ ಎಂದು ಉಮೇಶ್ ಅಳವಲು ತೋಡಿಕೊಂಡರು.</p>.<p>ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ 8.30ರ ವೇಳೆಗೆ ವಾಡಿಕೆ ಮಳೆ 2.8 ಮಿ.ಮೀಗೆ ಸರಾಸರಿ 6 ಮಿ.ಮೀ ಮಳೆಯಾಗಿದೆ. ಚನ್ನಗಿರಿಯಲ್ಲಿ 8, ದಾವಣಗೆರೆ ತಾಲ್ಲೂಕಿನಲ್ಲಿ 7.7 ಮಿ.ಮೀ, ಹರಿಹರದಲ್ಲಿ 3.8 ಮಿ.ಮೀ, ಹೊನ್ನಾಳಿಯಲ್ಲಿ 8.5 ಮಿ.ಮೀ, ಜಗಳೂರಿನಲ್ಲಿ 1 ಮಿ.ಮೀ. ಹಾಗೂ ನ್ಯಾಮತಿಯಲ್ಲಿ ಸರಾಸರಿ 7.4 ಮಿ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>