ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಮಾದರಿಯಲ್ಲಿ ಮರಳು ವಿತರಣೆಗೆ ಚಿಂತನೆ

Last Updated 2 ಜುಲೈ 2019, 11:08 IST
ಅಕ್ಷರ ಗಾತ್ರ

ದಾವಣಗೆರೆ: ತೆಲಂಗಾಣ ಮಾದರಿಯಲ್ಲಿ ಮರಳು ವಿತರಿಸಲು ಚಿಂತನೆ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಬಿ ಪಾಟೀಲ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರನೇ ತಾರೀಕಿನಂದು ಮರಳಿನ ವಿಚಾರವಾಗಿ ಸಬ್ ಕಮಿಟಿ ಮೀಟಿಂಗ್ ಇದೆ. ಪರಮೇಶ್ವರ್ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ನಾಳೆಯ ಸಭೆ ಬಳಿಕ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ , ಆನಂದ್ ಸಿಂಗ್ ರಾಜಿನಾಮೆ ಕೊಟ್ಟಿದ್ದಾರೆ ಎಂಬುದನ್ನ ಮಾಧ್ಯಮಗಳ ಮೂಲಕ ನೋಡಿದ್ದೇನೆ.
ಆನಂದ್ ಸಿಂಗ್ ರಾಜಿನಾಮೆಗೆ ಬೇರೆ ಕಾರಣ ಇದೆ. ಸರ್ಕಾರ ರಚನೆಯಾದಾಗಿನಿಂದಲೂ ಬೀಳಿಸಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದರು.

ಶಾಮನೂರು ಶಿವಶಂಕರಪ್ಪ ಮನೆಯಲ್ಲಿ ಊಟ ಮಾಡಿ ಬಂದಿದ್ದೇನೆ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನಿಗದಿತ ಕಾರ್ಯಕ್ರಮಕ್ಕೆ ಸಿಎಂ ಅಮೆರಿಕಕ್ಕೆ ಹೋಗಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT