ದಾವಣಗೆರೆ: ತೆಲಂಗಾಣ ಮಾದರಿಯಲ್ಲಿ ಮರಳು ವಿತರಿಸಲು ಚಿಂತನೆ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಬಿ ಪಾಟೀಲ್ ತಿಳಿಸಿದರು.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರನೇ ತಾರೀಕಿನಂದು ಮರಳಿನ ವಿಚಾರವಾಗಿ ಸಬ್ ಕಮಿಟಿ ಮೀಟಿಂಗ್ ಇದೆ. ಪರಮೇಶ್ವರ್ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ನಾಳೆಯ ಸಭೆ ಬಳಿಕ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
ರಮೇಶ್ ಜಾರಕಿಹೊಳಿ , ಆನಂದ್ ಸಿಂಗ್ ರಾಜಿನಾಮೆ ಕೊಟ್ಟಿದ್ದಾರೆ ಎಂಬುದನ್ನ ಮಾಧ್ಯಮಗಳ ಮೂಲಕ ನೋಡಿದ್ದೇನೆ. ಆನಂದ್ ಸಿಂಗ್ ರಾಜಿನಾಮೆಗೆ ಬೇರೆ ಕಾರಣ ಇದೆ. ಸರ್ಕಾರ ರಚನೆಯಾದಾಗಿನಿಂದಲೂ ಬೀಳಿಸಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದರು.
ಶಾಮನೂರು ಶಿವಶಂಕರಪ್ಪ ಮನೆಯಲ್ಲಿ ಊಟ ಮಾಡಿ ಬಂದಿದ್ದೇನೆ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ನಿಗದಿತ ಕಾರ್ಯಕ್ರಮಕ್ಕೆ ಸಿಎಂ ಅಮೆರಿಕಕ್ಕೆ ಹೋಗಿದ್ದಾರೆ ಎಂದರು.