ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ಸುಲ್ತಾನ್‌ಬಿ ನಿಧನ

Last Updated 26 ಜುಲೈ 2022, 5:29 IST
ಅಕ್ಷರ ಗಾತ್ರ

ಜಗಳೂರು: ಸೂಲಗಿತ್ತಿ ಸೇವೆ ಸಲ್ಲಿಸುತ್ತಿದ್ದ,ಜಗಳೂರು ಗೊಲ್ಲರಹಟ್ಟಿ ಗ್ರಾಮದ ಸುಲ್ತಾನ್‌ಬಿ (85) ಸೋಮವಾರ ನಿಧನರಾದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಆರು ದಶಕಗಳಿಂದ ಗ್ರಾಮೀಣ ಭಾಗದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ನಿಸ್ವಾರ್ಥ ಸೇವೆಯಿಂದ ಹೆಸರಾಗಿದ್ದರು. ಅವರ ಸೇವೆ ಪರಿಗಣಿಸಿ ರಾಜ್ಯ ಸರ್ಕಾರವು 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಪುತ್ರ, ಪುತ್ರಿ ಹಾಗೂ ಪತಿಯ ಅಗಲಿಕೆಯ ಬಳಿಕ ಇವರು ಗ್ರಾಮದಲ್ಲಿ ಒಂಟಿಜೀವನ ನಡೆಸುತ್ತಿದ್ದರು.

ಸೋಮವಾರ ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT