<p><strong>ಹೊನ್ನಾಳಿ:</strong> ತಾಲ್ಲೂಕಿನ ಎಂ. ಹನುಮನಹಳ್ಳಿ, ಸಿಂಗಟಗೆರೆ ಗ್ರಾಮದ ರಾಮನಕೆರೆ 15 ವರ್ಷಗಳ ನಂತರ ತುಂಬಿ ಹರಿದಿದ್ದು, ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮತ್ತು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅವರು ಗುರುವಾರ ಬಾಗಿನ ಅರ್ಪಿಸಿದರು.</p>.<p>ರಾಮನಕೆರೆಯು 70 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆ ತುಂಬಿ ಕೋಡಿ ಹರಿಯುತ್ತಿರುವುದರಿಂದ ಬೇವಿನಹಳ್ಳಿ, ಸಿಂಗಟಗೆರೆ, ಎಂ. ಹನುಮನಹಳ್ಳಿ, ತರಗನಹಳ್ಳಿ, ಮಾಸಡಿ, ನೇರಲಗುಂಡಿ, ತಿಮ್ಲಾಪುರ, ಸೇವಾಲಾಲ್ನಗರ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಈ ಭಾಗದ ಸಾವಿರಾರು ಎಕರೆ ಜಮೀನುಗಳಿಗೆ ಉಪಯೋಗವಾಗಲಿದೆ. ಭೂಮಿಯ ಅಂತರ್ಜಲ ಮಟ್ಟವೂ ಹೆಚ್ಚಾಗಲಿದೆ ಎಂದು ಡಿ.ಜಿ. ಶಾಂತನಗೌಡ ಸಂತಸಪಟ್ಟರು.</p>.<p>ಡಿ.ಜಿ. ಶಾಂತನಗೌಡ ಅವರು ಅಧಿಕಾರದಲ್ಲಿದ್ದಾಗ ಕೆರೆಗೆ ಏತ ನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಗೆ ₹ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು. ಕಾಮಗಾರಿ ಶೇ 70ರಷ್ಟು ಮುಗಿದಿದೆ. ಕೆರೆ ಅಭಿವೃದ್ಧಿಗೊಂಡ ನಂತರ ಹೊಳೆಯಿಂದ ಏತ ನೀರಾವರಿ ಮೂಲಕ ನೀರು ಹರಿಸಿ ಕೆರೆ ಸದಾ ತುಂಬಿರುವಂತೆ ನೋಡಿಕೊಳ್ಳಲಾಗುವುದು ಎಂದು ಶಿಮುಲ್ ನಿರ್ದೇಶಕ ಹನುಮನಹಳ್ಳಿ ಬಿ.ಜಿ. ಬಸವರಾಜಪ್ಪ ತಿಳಿಸಿದರು.</p>.<p>ತಿಮ್ಲಾಪುರ ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಟಿ.ಜಿ. ರಮೇಶಗೌಡ, ಮುಖಂಡರಾದ ಗಜೇಂದ್ರಪ್ಪ ಮಾಸಡಿ, ಗದ್ದಿಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶ್ವಿನಿ ನಟರಾಜಪ್ಪ, ಎಂ. ಚಂದ್ರಪ್ಪ, ಶಿವಾನಂದಪ್ಪ, ಜಗದೀಶ್, ಸಿದ್ದೇಶ್ವರ, ಶಂಕರಪ್ಪ, ಶಿವಣ್ಣ ಮತ್ತು ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ತಾಲ್ಲೂಕಿನ ಎಂ. ಹನುಮನಹಳ್ಳಿ, ಸಿಂಗಟಗೆರೆ ಗ್ರಾಮದ ರಾಮನಕೆರೆ 15 ವರ್ಷಗಳ ನಂತರ ತುಂಬಿ ಹರಿದಿದ್ದು, ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮತ್ತು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅವರು ಗುರುವಾರ ಬಾಗಿನ ಅರ್ಪಿಸಿದರು.</p>.<p>ರಾಮನಕೆರೆಯು 70 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆ ತುಂಬಿ ಕೋಡಿ ಹರಿಯುತ್ತಿರುವುದರಿಂದ ಬೇವಿನಹಳ್ಳಿ, ಸಿಂಗಟಗೆರೆ, ಎಂ. ಹನುಮನಹಳ್ಳಿ, ತರಗನಹಳ್ಳಿ, ಮಾಸಡಿ, ನೇರಲಗುಂಡಿ, ತಿಮ್ಲಾಪುರ, ಸೇವಾಲಾಲ್ನಗರ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಈ ಭಾಗದ ಸಾವಿರಾರು ಎಕರೆ ಜಮೀನುಗಳಿಗೆ ಉಪಯೋಗವಾಗಲಿದೆ. ಭೂಮಿಯ ಅಂತರ್ಜಲ ಮಟ್ಟವೂ ಹೆಚ್ಚಾಗಲಿದೆ ಎಂದು ಡಿ.ಜಿ. ಶಾಂತನಗೌಡ ಸಂತಸಪಟ್ಟರು.</p>.<p>ಡಿ.ಜಿ. ಶಾಂತನಗೌಡ ಅವರು ಅಧಿಕಾರದಲ್ಲಿದ್ದಾಗ ಕೆರೆಗೆ ಏತ ನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಗೆ ₹ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು. ಕಾಮಗಾರಿ ಶೇ 70ರಷ್ಟು ಮುಗಿದಿದೆ. ಕೆರೆ ಅಭಿವೃದ್ಧಿಗೊಂಡ ನಂತರ ಹೊಳೆಯಿಂದ ಏತ ನೀರಾವರಿ ಮೂಲಕ ನೀರು ಹರಿಸಿ ಕೆರೆ ಸದಾ ತುಂಬಿರುವಂತೆ ನೋಡಿಕೊಳ್ಳಲಾಗುವುದು ಎಂದು ಶಿಮುಲ್ ನಿರ್ದೇಶಕ ಹನುಮನಹಳ್ಳಿ ಬಿ.ಜಿ. ಬಸವರಾಜಪ್ಪ ತಿಳಿಸಿದರು.</p>.<p>ತಿಮ್ಲಾಪುರ ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಟಿ.ಜಿ. ರಮೇಶಗೌಡ, ಮುಖಂಡರಾದ ಗಜೇಂದ್ರಪ್ಪ ಮಾಸಡಿ, ಗದ್ದಿಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶ್ವಿನಿ ನಟರಾಜಪ್ಪ, ಎಂ. ಚಂದ್ರಪ್ಪ, ಶಿವಾನಂದಪ್ಪ, ಜಗದೀಶ್, ಸಿದ್ದೇಶ್ವರ, ಶಂಕರಪ್ಪ, ಶಿವಣ್ಣ ಮತ್ತು ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>