ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆಗೆ ಕನ್ಹಯ್ಯಾ ಸ್ಪರ್ಧೆ?

ಮಹಾಮೈತ್ರಿ ಕೂಟದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
Last Updated 17 ಜೂನ್ 2018, 18:12 IST
ಅಕ್ಷರ ಗಾತ್ರ

ಪಟ್ನಾ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಾಯಕನಾಗಿದ್ದ ಕನ್ಹಯ್ಯಾ ಕುಮಾರ್‌ 2019ರ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿ ಕೂಟದ ಅಭ್ಯರ್ಥಿಯಾಗಿ ಬಿಹಾರದ ಬೇಗುಸರಾಯ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಕಾಂಗ್ರೆಸ್‌, ಆರ್‌ಜೆಡಿ, ಎನ್‌ಸಿಪಿ, ಜಿತನ್‌ ರಾಮ್‌ ಮಾಂಝಿ ಅವರ ಎಚ್‌ಎಎಮ್‌ ಇರುವ ಮಹಾಮೈತ್ರಿ ಕೂಟ ಸೇರಿಕೊಳ್ಳಲು ಸಿದ್ಧ ಎಂದು ಎಡಪಕ್ಷಗಳು ಹೇಳಿವೆ. ಸಿಪಿಐ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲು ಕನ್ಹಯ್ಯಾ ಕುಮಾರ್‌ಗೆ ಪಕ್ಷ ಒಪ್ಪಿಗೆಯನ್ನೂ ಕೊಟ್ಟಿದೆ.

‘2004ರ ರೀತಿಯಲ್ಲಿಯೇ, ಬಿಜೆಪಿ ವಿರುದ್ಧ ಇರುವ ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ. ಬಿಹಾರದಲ್ಲಿ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ. ಇದರ ಭಾಗವಾಗಿ, ಬೇಗುಸರಾಯ್‌ ಕ್ಷೇತ್ರವನ್ನು ಸಿಪಿಐಗೆ ಬಿಟ್ಟುಕೊಡುವ ಸಾಧ್ಯತೆ ಹೆಚ್ಚು. ಅಲ್ಲಿ ಕನ್ಹಯ್ಯಾ ಕುಮಾರ್ ಸ್ಪರ್ಧಿಸಲಿದ್ದಾರೆ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಕನ್ಹಯ್ಯಾ ಅವರ ಹುಟ್ಟೂರು ಬೇಗುಸರಾಯ್‌. ಅವರ ತಾಯಿ ಮೀನಾ ದೇವಿ ಅಲ್ಲಿನ ಅಂಗನವಾಡಿಯೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐನ ರಾಷ್ಟ್ರೀಯ ಮಂಡಳಿಯ ಕಾರ್ಯದರ್ಶಿ ಕೆ.ಆರ್‌. ನಾರಾಯಣ್‌ ಅವರು ಪಟ್ನಾಕ್ಕೆ ಇತ್ತೀಚೆಗೆ ಭೇಟಿ ಕೊಟ್ಟಾಗ ಕನ್ಹಯ್ಯಾ ಸ್ಪರ್ಧೆಯ ಬಗ್ಗೆ ಸುಳಿವು ಕೊಟ್ಟಿದ್ದರು.

ಬಿಹಾರದ ಎಲ್ಲ 40 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಹಿರಿಯ ಮುಖಂಡ ತಾರೀಖ್‌ ಅನ್ವರ್‌ ಅವರು ಕತಿಹಾರ್‌ನಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು. ಶರದ್‌ ಯಾದವ್‌ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಸಂಸದರಾಗಿರುವ ಶತ್ರುಘ್ನ ಸಿನ್ಹಾ ಮತ್ತು ಕೀರ್ತಿ ಆಜಾದ್‌ ಅವರನ್ನು ಮಹಾಮೈತ್ರಿ ಕೂಟದ ಅಭ್ಯರ್ಥಿಗಳಾಗಿ ಬಿಹಾರದಿಂದ ಕಣಕ್ಕೆ ಇಳಿಸಲು ಈಗಾಗಲೇ ನಿರ್ಧರಿಸಲಾಗಿದೆ. ಪಟ್ನಾ ಸಾಹಿಬ್‌ನಿಂದ ಸಿನ್ಹಾ ಮತ್ತು ದರ್ಭಾಂಗದಿಂದ ಆಜಾದ್‌ ಸ್ಪರ್ಧಿಸಲಿದ್ದಾರೆ.

* ದೇಶದ್ರೋಹ ಆರೋಪದ ಬಳಿಕ ಪ್ರಸಿದ್ಧರಾದ ಕನ್ಹಯ್ಯಾ ಅವರನ್ನು ಮಹಾಮೈತ್ರಿಕೂಟದ ಅಭ್ಯರ್ಥಿಯಾಗಿ ಬಿಹಾರದ ಬೇಗುಸರಾಯ್‌ ನಿಂದ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT