<p><strong>ದಾವಣಗೆರೆ: </strong>ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಅಪರಾಧಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದೆ.</p>.<p>ಕಳೆದ ಏಪ್ರಿಲ್ 15ರಂದು ಮಧ್ಯಾಹ್ನದ ವೇಳೆ ಆರೋಪಿಯ ಮನೆ ಎದುರು ಆಟವಾಡುತ್ತಿದ್ದ ಬಾಲಕಿಯನ್ನು ಅಪರಾಧಿ ಎಳೆದೊಯ್ದು ಬಟ್ಟೆ ಬಿಚ್ಚಿ ಮಂಚದ ಮೇಲೆ ಮಲಗಿಸಿದ್ದಾನೆ. ಇದನ್ನು ನೋಡಿದ ಫಿರ್ಯಾದಿಯು ಬಾಲಕಿಯನ್ನು ರಕ್ಷಿಸಿ ಕರೆತಂದಿದ್ದಾರೆ.</p>.<p>ಶುಕ್ರವಾರ ವಿಚಾರಣೆ ನಡೆದು ನ್ಯಾಯಾಧೀಶರಾದ ಶ್ರೀಪಾದ ಎನ್. ಅವರು ಶಿಕ್ಷೆ ಪ್ರಕಟಿಸಿದ್ದಾರೆ. ದಂಡ ಕೊಡಲು ತಪ್ಪಿದ್ದಲ್ಲಿ ಇನ್ನೂ ಎರಡು ವರ್ಷ ಸಾದಾ ಶಿಕ್ಷೆಯನ್ನು ವಿಧಿಸಿದ್ದಾರೆ. ದಂಡದ ಹಣದಲ್ಲಿ ₹15 ಸಾವಿರವನ್ನು ನೊಂದ ಬಾಲಕಿಗೆ ನೀಡಬೇಕು. ಸರ್ಕಾರದಿಂದ ₹ 3 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.</p>.<p>ನಗರ ಉಪವಿಭಾಗದ ಡಿವೈಎಸ್ಪಿ ಎಸ್.ಎಂ. ನಾಗರಾಜ್ ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಕೆ. ನಾಗರಾಜ್ ಆಚಾರ್ ಸಾಕ್ಷಿ ವಿಚಾರಣೆ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಅಪರಾಧಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದೆ.</p>.<p>ಕಳೆದ ಏಪ್ರಿಲ್ 15ರಂದು ಮಧ್ಯಾಹ್ನದ ವೇಳೆ ಆರೋಪಿಯ ಮನೆ ಎದುರು ಆಟವಾಡುತ್ತಿದ್ದ ಬಾಲಕಿಯನ್ನು ಅಪರಾಧಿ ಎಳೆದೊಯ್ದು ಬಟ್ಟೆ ಬಿಚ್ಚಿ ಮಂಚದ ಮೇಲೆ ಮಲಗಿಸಿದ್ದಾನೆ. ಇದನ್ನು ನೋಡಿದ ಫಿರ್ಯಾದಿಯು ಬಾಲಕಿಯನ್ನು ರಕ್ಷಿಸಿ ಕರೆತಂದಿದ್ದಾರೆ.</p>.<p>ಶುಕ್ರವಾರ ವಿಚಾರಣೆ ನಡೆದು ನ್ಯಾಯಾಧೀಶರಾದ ಶ್ರೀಪಾದ ಎನ್. ಅವರು ಶಿಕ್ಷೆ ಪ್ರಕಟಿಸಿದ್ದಾರೆ. ದಂಡ ಕೊಡಲು ತಪ್ಪಿದ್ದಲ್ಲಿ ಇನ್ನೂ ಎರಡು ವರ್ಷ ಸಾದಾ ಶಿಕ್ಷೆಯನ್ನು ವಿಧಿಸಿದ್ದಾರೆ. ದಂಡದ ಹಣದಲ್ಲಿ ₹15 ಸಾವಿರವನ್ನು ನೊಂದ ಬಾಲಕಿಗೆ ನೀಡಬೇಕು. ಸರ್ಕಾರದಿಂದ ₹ 3 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.</p>.<p>ನಗರ ಉಪವಿಭಾಗದ ಡಿವೈಎಸ್ಪಿ ಎಸ್.ಎಂ. ನಾಗರಾಜ್ ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಕೆ. ನಾಗರಾಜ್ ಆಚಾರ್ ಸಾಕ್ಷಿ ವಿಚಾರಣೆ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>