<p>ಕುಳಗಟ್ಟೆ (ದಾವಣಗೆರೆ): ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ ಗ್ರಾಮದ ಆಂಜನೇಯಸ್ವಾಮಿ ಹಾಗೂ ಕಲ್ಯಾಣ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಂಭ್ರಮದಿಂದ ನಡೆಯಿತು.</p>.<p>ಸಂಪ್ರದಾಯದಂತೆ ಶ್ರೀರಾಮ ನವಮಿಯಂದು ಸಂಜೆ ಧಾರ್ಮಿಕ ಪೂಜಾ ಕಾರ್ಯಗಳ ನಂತರ ರಥೋತ್ಸವ ನಡೆಸಲಾಯಿತು.</p>.<p>ರಥೋತ್ಸವದ ಅಂಗವಾಗಿ ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದವು. ಅಲಂಕೃತ ಪಲ್ಲಕ್ಕಿಯಲ್ಲಿ ದೇವರ ಉತ್ಸವಮೂರ್ತಿ ಪೂಜೆಗೆ ಹೋಗಿ ರಥಬೀದಿಗೆ ಬರುತ್ತಿ ದ್ದಂತೆ ಪುರೋಹಿತರು ರಥ ಶಾಂತಿ ಪೂಜೆ ನೆರವೇರಿಸಿದರು. ಬ್ರಹ್ಮರಥವನ್ನು ವಿವಿಧ ಪುಷ್ಪಗಳು, ಧ್ವಜ-ಕಲಶಗಳಿಂದ ಅಲಂಕರಿಸಲಾಗಿತ್ತು.</p>.<p>ರಥಬೀದಿಯಲ್ಲಿದ್ದ ಸಾವಿರಾರು ಭಕ್ತರು, ‘ಆಂಜನೇಯ ನಿನ್ನ ಪಾದಾರವಿಂದಾ ಗೋವಿಂದಾ.. ಲಕ್ಷ್ಮಿರಮಣ ಗೋವಿಂದಾ...’ ಎಂದು ಜಯಘೋಷ ಹಾಕುತ್ತಾ ರಥವನ್ನು ಪಾದಗಟ್ಟೆಯವರೆಗೆ ಎಳೆದರು.</p>.<p>ಬಾಳೆಹಣ್ಣು, ಮೆಣಸು, ಮಂಡಕ್ಕಿಯನ್ನು ಭಕ್ತರು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಗ್ರಾಮದ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಳಗಟ್ಟೆ (ದಾವಣಗೆರೆ): ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ ಗ್ರಾಮದ ಆಂಜನೇಯಸ್ವಾಮಿ ಹಾಗೂ ಕಲ್ಯಾಣ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಂಭ್ರಮದಿಂದ ನಡೆಯಿತು.</p>.<p>ಸಂಪ್ರದಾಯದಂತೆ ಶ್ರೀರಾಮ ನವಮಿಯಂದು ಸಂಜೆ ಧಾರ್ಮಿಕ ಪೂಜಾ ಕಾರ್ಯಗಳ ನಂತರ ರಥೋತ್ಸವ ನಡೆಸಲಾಯಿತು.</p>.<p>ರಥೋತ್ಸವದ ಅಂಗವಾಗಿ ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದವು. ಅಲಂಕೃತ ಪಲ್ಲಕ್ಕಿಯಲ್ಲಿ ದೇವರ ಉತ್ಸವಮೂರ್ತಿ ಪೂಜೆಗೆ ಹೋಗಿ ರಥಬೀದಿಗೆ ಬರುತ್ತಿ ದ್ದಂತೆ ಪುರೋಹಿತರು ರಥ ಶಾಂತಿ ಪೂಜೆ ನೆರವೇರಿಸಿದರು. ಬ್ರಹ್ಮರಥವನ್ನು ವಿವಿಧ ಪುಷ್ಪಗಳು, ಧ್ವಜ-ಕಲಶಗಳಿಂದ ಅಲಂಕರಿಸಲಾಗಿತ್ತು.</p>.<p>ರಥಬೀದಿಯಲ್ಲಿದ್ದ ಸಾವಿರಾರು ಭಕ್ತರು, ‘ಆಂಜನೇಯ ನಿನ್ನ ಪಾದಾರವಿಂದಾ ಗೋವಿಂದಾ.. ಲಕ್ಷ್ಮಿರಮಣ ಗೋವಿಂದಾ...’ ಎಂದು ಜಯಘೋಷ ಹಾಕುತ್ತಾ ರಥವನ್ನು ಪಾದಗಟ್ಟೆಯವರೆಗೆ ಎಳೆದರು.</p>.<p>ಬಾಳೆಹಣ್ಣು, ಮೆಣಸು, ಮಂಡಕ್ಕಿಯನ್ನು ಭಕ್ತರು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಗ್ರಾಮದ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>