<p><strong>ದಾವಣಗೆರೆ</strong>: ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ನೋಟು ಮುದ್ರಣ ಘಟಕದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯ ₹ 2.5 ಕೋಟಿ ಮೊತ್ತದಲ್ಲಿ ಒದಗಿಸಿದ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಗುರುವಾರ ಹಸ್ತಾಂತರಿಸಲಾಯಿತು.</p>.<p>ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಕರಣಗಳನ್ನು ಹಸ್ತಾಂತರಿಸಿದರು.</p>.<p>‘ಮಧ್ಯ ಕರ್ನಾಟಕದಲ್ಲಿರುವ ದಾವಣಗೆರೆಯ ಜಿಲ್ಲಾ ಆಸ್ಪತ್ರೆ ಪ್ರತಿ ತಿಂಗಳು 45 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಅಕ್ಕ–ಪಕ್ಕದ ಜಿಲ್ಲೆಯ ರೋಗಿಗಳು ಕೂಡ ಈ ಆಸ್ಪತ್ರೆಯ ಸೇವೆ ಪಡೆಯುತ್ತಿದ್ದಾರೆ. ಇಲ್ಲಿ ವೆಂಟಿಲೇಟರ್, ಫಿಸಿಯೋಥೆರಪಿ, ಲ್ಯಾಕ್ಟೋಸ್ಕೋಪಿ ಸೇರಿದಂತೆ ಹಲವು ಉಪಕರಣಗಳ ಕೊರತೆ ಇತ್ತು. ಇದರಿಂದ ಖಾಸಗಿ ಆಸ್ಪತ್ರೆ ಅಥವಾ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಶಿಫಾರಸು ಮಾಡಲಾಗುತ್ತಿತ್ತು’ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.</p>.<p>‘ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮಾನವೀಯ ರೀತಿಯಲ್ಲಿ ಸ್ಪಂದಿಸಬೇಕು. ಉತ್ತಮ ವೈದ್ಯಕೀಯ ಸೇವೆ ನೀಡಬೇಕು. ಅನುದಾನ, ಔಷಧ ಲಭ್ಯತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ವೈದ್ಯಕೀಯ ಉಪಕರಣಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘₹ 267 ಕೋಟಿ ವೆಚ್ಚದಲ್ಲಿ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಜಿಲ್ಲಾ ಆಸ್ಪತ್ರೆಯ ಹಳೆಯ ಕಟ್ಟಡದ ದುರಸ್ತಿಗೆ ₹ 43 ಕೋಟಿ ಅನುದಾನ ಲಭ್ಯವಾಗಿದ್ದು, ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರೆತೆ ಕಂಡುಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡು ಅಗತ್ಯ ಸಿಬ್ಬಂದಿ ನಿಯೋಜಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಆರ್ಬಿಐ ನೋಟು ಮುದ್ರಣ ಘಟಕದ ವ್ಯವಸ್ಥಾಪಕ ನಿರ್ದೇಶಕ ಎಸ್. ತಾಳಕೇರಪ್ಪ, ‘ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದನ್ನು ಗಮನಿಸಿ ದೊಡ್ಡ ಮೊತ್ತದ ವೈದ್ಯಕೀಯ ಉಪಕರಣ ನೀಡಲಾಗಿದೆ. 1 ಫಿಸಿಯೋಥರಫಿ ಘಟಕ, ವೆಂಟಿಲೇಟರ್ ಒಳಗೊಂಡ ಅನಸ್ತೇಶಿಯಾ ವರ್ಕ್ ಸ್ಟೇಷನ್ 2, ಮೊಬೈಲ್ ಒಟಿ ಲೈಟ್ 5, ಪೇಡಿಯಾಟ್ರಿಕ್ ವೆಂಟಿಲೇಟರ್ 2 ಸೇರಿದಂತೆ 19 ವೈದ್ಯಕೀಯ ಉಪಕರಣ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಶಿವಕುರಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ನಾಗೇಂದ್ರಪ್ಪ ಹಾಜರಿದ್ದರು.</p>.<h2> ಅಂಗಾಂಗ ದಾನ: ಜಾಗೃತಿಗೆ ಸೂಚನೆ</h2><h2></h2><p> ‘ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಅಂಗಾಂಗ ದಾನದ ಕುರಿತು ಮಾಹಿತಿಯ ಕೊರೆತೆ ಇದೆ. ಈ ಕುರಿತು ಕಾರ್ಯಗಾರ ಆಯೋಜಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು. ‘ಅಂಗಾಂಗಗಳ ಕೊರತೆಯಿಂದ ಅನೇಕರಿಗೆ ತೊಂದರೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇದಕ್ಕೆ ಅಂದಾಜು ₹ 20 ಲಕ್ಷದಿಂದ ₹ 25 ಲಕ್ಷ ವೆಚ್ಚವಾಗುತ್ತದೆ. ಈ ದುಬಾರಿ ವೆಚ್ಚವನ್ನು ಸಾರ್ವಜನಿಕರು ಬಡವರು ಭರಿಸಲು ಸಾಧ್ಯವಿಲ್ಲ. ಹೀಗಾಗಿ ಅಂಗದಾನ ದೇಹದಾನದ ಮಹತ್ವದ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು. ಒಬ್ಬ ವ್ಯಕ್ತಿಯ ದೇಹ ಅಥವಾ ಅಂಗಾಂಗ ದಾನದಿಂದ 8 ಜನರನ್ನು ಅಂಗವಿಕಲತೆಯಿಂದ ರಕ್ಷಿಸಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ನೋಟು ಮುದ್ರಣ ಘಟಕದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯ ₹ 2.5 ಕೋಟಿ ಮೊತ್ತದಲ್ಲಿ ಒದಗಿಸಿದ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಗುರುವಾರ ಹಸ್ತಾಂತರಿಸಲಾಯಿತು.</p>.<p>ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಕರಣಗಳನ್ನು ಹಸ್ತಾಂತರಿಸಿದರು.</p>.<p>‘ಮಧ್ಯ ಕರ್ನಾಟಕದಲ್ಲಿರುವ ದಾವಣಗೆರೆಯ ಜಿಲ್ಲಾ ಆಸ್ಪತ್ರೆ ಪ್ರತಿ ತಿಂಗಳು 45 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಅಕ್ಕ–ಪಕ್ಕದ ಜಿಲ್ಲೆಯ ರೋಗಿಗಳು ಕೂಡ ಈ ಆಸ್ಪತ್ರೆಯ ಸೇವೆ ಪಡೆಯುತ್ತಿದ್ದಾರೆ. ಇಲ್ಲಿ ವೆಂಟಿಲೇಟರ್, ಫಿಸಿಯೋಥೆರಪಿ, ಲ್ಯಾಕ್ಟೋಸ್ಕೋಪಿ ಸೇರಿದಂತೆ ಹಲವು ಉಪಕರಣಗಳ ಕೊರತೆ ಇತ್ತು. ಇದರಿಂದ ಖಾಸಗಿ ಆಸ್ಪತ್ರೆ ಅಥವಾ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಶಿಫಾರಸು ಮಾಡಲಾಗುತ್ತಿತ್ತು’ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.</p>.<p>‘ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮಾನವೀಯ ರೀತಿಯಲ್ಲಿ ಸ್ಪಂದಿಸಬೇಕು. ಉತ್ತಮ ವೈದ್ಯಕೀಯ ಸೇವೆ ನೀಡಬೇಕು. ಅನುದಾನ, ಔಷಧ ಲಭ್ಯತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ವೈದ್ಯಕೀಯ ಉಪಕರಣಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘₹ 267 ಕೋಟಿ ವೆಚ್ಚದಲ್ಲಿ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಜಿಲ್ಲಾ ಆಸ್ಪತ್ರೆಯ ಹಳೆಯ ಕಟ್ಟಡದ ದುರಸ್ತಿಗೆ ₹ 43 ಕೋಟಿ ಅನುದಾನ ಲಭ್ಯವಾಗಿದ್ದು, ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರೆತೆ ಕಂಡುಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡು ಅಗತ್ಯ ಸಿಬ್ಬಂದಿ ನಿಯೋಜಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಆರ್ಬಿಐ ನೋಟು ಮುದ್ರಣ ಘಟಕದ ವ್ಯವಸ್ಥಾಪಕ ನಿರ್ದೇಶಕ ಎಸ್. ತಾಳಕೇರಪ್ಪ, ‘ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದನ್ನು ಗಮನಿಸಿ ದೊಡ್ಡ ಮೊತ್ತದ ವೈದ್ಯಕೀಯ ಉಪಕರಣ ನೀಡಲಾಗಿದೆ. 1 ಫಿಸಿಯೋಥರಫಿ ಘಟಕ, ವೆಂಟಿಲೇಟರ್ ಒಳಗೊಂಡ ಅನಸ್ತೇಶಿಯಾ ವರ್ಕ್ ಸ್ಟೇಷನ್ 2, ಮೊಬೈಲ್ ಒಟಿ ಲೈಟ್ 5, ಪೇಡಿಯಾಟ್ರಿಕ್ ವೆಂಟಿಲೇಟರ್ 2 ಸೇರಿದಂತೆ 19 ವೈದ್ಯಕೀಯ ಉಪಕರಣ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಶಿವಕುರಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ನಾಗೇಂದ್ರಪ್ಪ ಹಾಜರಿದ್ದರು.</p>.<h2> ಅಂಗಾಂಗ ದಾನ: ಜಾಗೃತಿಗೆ ಸೂಚನೆ</h2><h2></h2><p> ‘ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಅಂಗಾಂಗ ದಾನದ ಕುರಿತು ಮಾಹಿತಿಯ ಕೊರೆತೆ ಇದೆ. ಈ ಕುರಿತು ಕಾರ್ಯಗಾರ ಆಯೋಜಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು. ‘ಅಂಗಾಂಗಗಳ ಕೊರತೆಯಿಂದ ಅನೇಕರಿಗೆ ತೊಂದರೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇದಕ್ಕೆ ಅಂದಾಜು ₹ 20 ಲಕ್ಷದಿಂದ ₹ 25 ಲಕ್ಷ ವೆಚ್ಚವಾಗುತ್ತದೆ. ಈ ದುಬಾರಿ ವೆಚ್ಚವನ್ನು ಸಾರ್ವಜನಿಕರು ಬಡವರು ಭರಿಸಲು ಸಾಧ್ಯವಿಲ್ಲ. ಹೀಗಾಗಿ ಅಂಗದಾನ ದೇಹದಾನದ ಮಹತ್ವದ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು. ಒಬ್ಬ ವ್ಯಕ್ತಿಯ ದೇಹ ಅಥವಾ ಅಂಗಾಂಗ ದಾನದಿಂದ 8 ಜನರನ್ನು ಅಂಗವಿಕಲತೆಯಿಂದ ರಕ್ಷಿಸಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>