ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆಯಾದ ಜನರ ಓಡಾಟ

Last Updated 12 ಮೇ 2021, 5:27 IST
ಅಕ್ಷರ ಗಾತ್ರ

ದಾವಣಗೆರೆ: ಲಾಕ್‌ಡೌನ್‌ ಕಟ್ಟುನಿಟ್ಟಿನ ಜಾರಿಯ ಪರಿಣಾಮ ಎರಡನೇ ದಿನ ಕಂಡಿದೆ. ಬೆಳಿಗ್ಗೆ 10 ಗಂಟೆಯ ನಂತರ ಜನ ರಸ್ತೆಗೆ ಇಳಿದಿಲ್ಲ. ಮೊದಲ ದಿನ ಹಲವು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದರಿಂದ ವಾಹನಗಳನ್ನು ಜನರು ಮಂಗಳವಾರ ಹೊರಗೆ ತರದೇ ಸ್ವಯಂ ನಿಯಂತ್ರಣ ಹಾಕಿಕೊಂಡಿದ್ದರು. ಹಾಗಾಗಿ 10 ಗಂಟೆಯ ಬಳಿಕ ಬಹುತೇಕ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ಕೆಎಸ್‍ಆರ್‌ಟಿಸಿ ಬಸ್‍ನಿಲ್ದಾಣ, ಖಾಸಗಿ ಬಸ್‍ನಿಲ್ದಾಣ, ಮಾರುಕಟ್ಟೆ ಪ್ರದೇಶಗಳು, ಆಟೋನಿಲ್ದಾಣಗಳು ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು. ದಾವಣಗೆರೆ ನಗರವನ್ನು ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿತ್ತು. ಸಾರ್ವಜನಿಕರು ಹೊರಗೆ ಬಾರದೇ ಲಾಕ್‍ಡೌನ್‍ಗೆ ಸಹಕರಿಸಿದರು.

ಲಾಕ್‍ಡೌನ್ ಜಾರಿಯಲ್ಲಿದ್ದರೂ ಜನರ ಓಡಾಟ ಇರುತ್ತಿದ್ದ ಕೆ.ಆರ್.ಮಾರುಕಟ್ಟೆ, ಎಪಿಎಂಸಿ, ಹಳೇ ದಾವಣಗೆರೆಯ ಕೆಲವು ರಸ್ತೆಗಳು ಖಾಲಿಯಾಗಿದ್ದವು. ವಾಹನ ಮತ್ತು ಜನರ ಸಂಚಾರ ವಿರಳವಾಗಿತ್ತು. ಕೆಲವು ಕಡೆಗಳಲ್ಲಿ ಮಾತ್ರ ಪೊಲೀಸರಿಗೆ ಜಪ್ತಿ ಮಾಡಲು ವಾಹನಗಳು ಸಿಕ್ಕಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT