<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ.</p>.<p>ಜಿಲ್ಲೆಯಲ್ಲಿ 2.41 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಗುರಿ ಇದ್ದು, ಶನಿವಾರದ ವೇಳೆಗೆ 1,44,115 ಹೆಕ್ಟೇರ್ಗಳಲ್ಲಿ ಬಿತ್ತನೆಯಾಗಿದೆ. 1.26 ಲಕ್ಷ ಹೆಕ್ಟೇರ್ನಲ್ಲಿ ಮೆಕ್ಕೆಜೋಳದ ಬಿತ್ತನೆ ಗುರಿ ಇದ್ದು, ಅದರಲ್ಲಿ ಈಗಾಗಲೇ 1.20 ಲಕ್ಷ ಹೆಕ್ಟೇರ್ ಬಿತ್ತನೆ ಪೂರ್ಣಗೊಂಡಿದೆ.</p>.<p>ಜಿಲ್ಲೆಯಲ್ಲಿ 45,537 ಹೆಕ್ಟೇರ್ಗಳಲ್ಲಿ ಭತ್ತದ ಬಿತ್ತನೆ ಗುರಿ ಇದ್ದು, ಶನಿವಾರದವರೆಗೆ 1,675 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಕಾಲುವೆಗಳಲ್ಲಿ 275 ಹೆಕ್ಟೇರ್, ಕೆರೆಗಳಲ್ಲಿ 300 ಹೆಕ್ಟೇರ್ ಹಾಗೂ ಇತರೆ ಮೂಲಗಳಲ್ಲಿ 1100 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯ ನಡೆದಿದೆ.</p>.<p>811 ಹೆಕ್ಟೇರ್ನಲ್ಲಿರಾಗಿ ಹಾಗೂ 637 ಹೆಕ್ಟೇರ್ನಲ್ಲಿ ರೈತರು ಜೋಳ ಬಿತ್ತನೆ ಮಾಡಿದ್ದಾರೆ.13,648 ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯಗಳು, 2040 ಹೆಕ್ಟೇರ್ನಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆಯಾಗಿದೆ.</p>.<p>ಜಿಲ್ಲೆಯಲ್ಲಿ ಶನಿವಾರ 2.62 ಮಿ.ಮೀ ಸರಾಸರಿ ಮಳೆಯಾಗಿದ್ದು, ₹ 27.85ಲಕ್ಷದಷ್ಟು ಮನೆ ಹಾಗೂ ಬೆಳೆ ಹಾನಿಯಾಗಿದೆ.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 2.33 ಮಿ.ಮೀ, ಹರಿಹರದಲ್ಲಿ 0.85 ಮಿ.ಮೀ, ಹೊನ್ನಾಳಿಯಲ್ಲಿ 2.4 ಮಿ.ಮೀ, ಚನ್ನಗಿರಿಯಲ್ಲಿ 7.54ರಷ್ಟು ಸರಾಸರಿ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 8, ಹೊನ್ನಾಳಿಯಲ್ಲಿ 5, ನ್ಯಾಮತಿಯಲ್ಲಿ 33, ಚನ್ನಗಿರಿಯಲ್ಲಿ 9 ಮನೆಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ.</p>.<p>ಜಿಲ್ಲೆಯಲ್ಲಿ 2.41 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಗುರಿ ಇದ್ದು, ಶನಿವಾರದ ವೇಳೆಗೆ 1,44,115 ಹೆಕ್ಟೇರ್ಗಳಲ್ಲಿ ಬಿತ್ತನೆಯಾಗಿದೆ. 1.26 ಲಕ್ಷ ಹೆಕ್ಟೇರ್ನಲ್ಲಿ ಮೆಕ್ಕೆಜೋಳದ ಬಿತ್ತನೆ ಗುರಿ ಇದ್ದು, ಅದರಲ್ಲಿ ಈಗಾಗಲೇ 1.20 ಲಕ್ಷ ಹೆಕ್ಟೇರ್ ಬಿತ್ತನೆ ಪೂರ್ಣಗೊಂಡಿದೆ.</p>.<p>ಜಿಲ್ಲೆಯಲ್ಲಿ 45,537 ಹೆಕ್ಟೇರ್ಗಳಲ್ಲಿ ಭತ್ತದ ಬಿತ್ತನೆ ಗುರಿ ಇದ್ದು, ಶನಿವಾರದವರೆಗೆ 1,675 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಕಾಲುವೆಗಳಲ್ಲಿ 275 ಹೆಕ್ಟೇರ್, ಕೆರೆಗಳಲ್ಲಿ 300 ಹೆಕ್ಟೇರ್ ಹಾಗೂ ಇತರೆ ಮೂಲಗಳಲ್ಲಿ 1100 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯ ನಡೆದಿದೆ.</p>.<p>811 ಹೆಕ್ಟೇರ್ನಲ್ಲಿರಾಗಿ ಹಾಗೂ 637 ಹೆಕ್ಟೇರ್ನಲ್ಲಿ ರೈತರು ಜೋಳ ಬಿತ್ತನೆ ಮಾಡಿದ್ದಾರೆ.13,648 ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯಗಳು, 2040 ಹೆಕ್ಟೇರ್ನಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆಯಾಗಿದೆ.</p>.<p>ಜಿಲ್ಲೆಯಲ್ಲಿ ಶನಿವಾರ 2.62 ಮಿ.ಮೀ ಸರಾಸರಿ ಮಳೆಯಾಗಿದ್ದು, ₹ 27.85ಲಕ್ಷದಷ್ಟು ಮನೆ ಹಾಗೂ ಬೆಳೆ ಹಾನಿಯಾಗಿದೆ.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 2.33 ಮಿ.ಮೀ, ಹರಿಹರದಲ್ಲಿ 0.85 ಮಿ.ಮೀ, ಹೊನ್ನಾಳಿಯಲ್ಲಿ 2.4 ಮಿ.ಮೀ, ಚನ್ನಗಿರಿಯಲ್ಲಿ 7.54ರಷ್ಟು ಸರಾಸರಿ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 8, ಹೊನ್ನಾಳಿಯಲ್ಲಿ 5, ನ್ಯಾಮತಿಯಲ್ಲಿ 33, ಚನ್ನಗಿರಿಯಲ್ಲಿ 9 ಮನೆಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>