<p><strong>ದಾವಣಗೆರೆ:</strong> ಬದುಕಿನ ಭಾಗ್ಯೋದಯಕ್ಕೆ ಧರ್ಮದ ಬೆಳಕು ಅಗತ್ಯ. ಮನುಷ್ಯನಿಗೆ ಭೂಮಿ ಎಷ್ಟು ಮುಖ್ಯವೋ ಧರ್ಮವೂ ಅಷ್ಟೇ ಮುಖ್ಯ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಲೆನಿನ್ ನಗರದಲ್ಲಿ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಶುಕ್ರವಾರ ಹಮ್ಮಿಕೊಂಡಿದ್ದ ಚೌಡೇಶ್ವರಿದೇವಿ ಕಾರ್ತಿಕೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಮನುಷ್ಯ ಜೀವನವನ್ನು ಸುಂದರ, ಶುದ್ಧಗೊಳಿಸುವುದು ಧರ್ಮದ ಗುರಿ. ಸಮಸ್ತ ಜನರ ಮೋಕ್ಷಗಳಿಗೆ ಧರ್ಮವೇ ಮೂಲ’ ಎಂದು ಪ್ರತಿಪಾದಿಸಿದರು.</p>.<p>‘ದೇವರು ಎಲ್ಲರಲ್ಲಿದ್ದರೂ ದೇವರಲ್ಲಿ ಎಲ್ಲರೂ ಇಲ್ಲ. ಭಗವಂತನೆಡೆಗೆ ಭಕ್ತರು ಸಾಗಿದಾಗ ಜೀವನ ಪಾವನವಾಗುತ್ತದೆ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ನಂದಾದೀಪ’ ಎಂದು ಹೇಳಿದರು.</p>.<p>‘ಈ ಜಗತ್ತು ಶಿವ ಶಕ್ತಿಯಿಂದ ನಿರ್ಮಾಣಗೊಂಡಿದೆ. ಶಿವನ ಆರಾಧನೆಯಷ್ಟೇ ಶಕ್ತಿ ಆರಾಧನೆಯೂ ಪ್ರಾಚೀನ. ಜ್ಞಾನ, ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಂಪತ್ತಿನ ಜೊತೆಗೆ ಸಭ್ಯತೆ, ಸಂಸ್ಕೃತಿಯೂ ಬೆಳೆಯಬೇಕು’ ಎಂದರು.</p>.<p>ದಾವಣಗೆರೆ-ಹರಿಹರ ಅರ್ಬನ್ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ, ‘ಭೌತಿಕ ಜೀವನ ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕು. ಶ್ರದ್ಧೆ ಇದ್ದರೆ ಧರ್ಮ, ಸಂಸ್ಕೃತಿ ಉಳಿಯಲು ಸಾಧ್ಯ. ವೈಚಾರಿಕತೆ ಹೆಸರಿನಲ್ಲಿ ನಾಡಿನ ಸಂಸ್ಕೃತಿ ನಾಶವಾಗಬಾರದು’ ಎಂದು ಹೇಳಿದರು.</p>.<p>ಆವರಗೊಳ್ಳದ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ‘ಹೊರಗಿನ ಕತ್ತಲೆ ಕಳೆಯಲು ದೀಪ ಬೇಕು. ಅಂತರಂಗದ ಕತ್ತಲೆ ಕಳೆಯಲು ಗುರು ಬೋಧನೆ ಮುಖ್ಯ’ ಎಂದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಎಸ್.ಜಿ. ಉಳವಯ್ಯ, ಮುಖಂಡರಾದ ಎಸ್.ಜೆ. ಶ್ರೀಧರ, ಅಕ್ಕಿ ರಾಜು, ‘ಧೂಡಾ’ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ ಹಾಜರಿದ್ದರು.</p>.<p>ಸಮಾರಂಭಕ್ಕೂ ಮುನ್ನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅವರನ್ನು ಸಾರೋಟಿನಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು. ಕುಂಭ ಹೊತ್ತು, ಆರತಿ ಹಿಡಿದ ಮಹಿಳೆಯರು ಜಾನಪದ ಕಲಾತಂಡಗಳು ಉತ್ಸವದಲ್ಲಿ ಪಾಲ್ಗೊಂಡು ಮೆರವಣಿಗೆಗೆಯಲ್ಲಿ ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬದುಕಿನ ಭಾಗ್ಯೋದಯಕ್ಕೆ ಧರ್ಮದ ಬೆಳಕು ಅಗತ್ಯ. ಮನುಷ್ಯನಿಗೆ ಭೂಮಿ ಎಷ್ಟು ಮುಖ್ಯವೋ ಧರ್ಮವೂ ಅಷ್ಟೇ ಮುಖ್ಯ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಲೆನಿನ್ ನಗರದಲ್ಲಿ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಶುಕ್ರವಾರ ಹಮ್ಮಿಕೊಂಡಿದ್ದ ಚೌಡೇಶ್ವರಿದೇವಿ ಕಾರ್ತಿಕೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಮನುಷ್ಯ ಜೀವನವನ್ನು ಸುಂದರ, ಶುದ್ಧಗೊಳಿಸುವುದು ಧರ್ಮದ ಗುರಿ. ಸಮಸ್ತ ಜನರ ಮೋಕ್ಷಗಳಿಗೆ ಧರ್ಮವೇ ಮೂಲ’ ಎಂದು ಪ್ರತಿಪಾದಿಸಿದರು.</p>.<p>‘ದೇವರು ಎಲ್ಲರಲ್ಲಿದ್ದರೂ ದೇವರಲ್ಲಿ ಎಲ್ಲರೂ ಇಲ್ಲ. ಭಗವಂತನೆಡೆಗೆ ಭಕ್ತರು ಸಾಗಿದಾಗ ಜೀವನ ಪಾವನವಾಗುತ್ತದೆ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ನಂದಾದೀಪ’ ಎಂದು ಹೇಳಿದರು.</p>.<p>‘ಈ ಜಗತ್ತು ಶಿವ ಶಕ್ತಿಯಿಂದ ನಿರ್ಮಾಣಗೊಂಡಿದೆ. ಶಿವನ ಆರಾಧನೆಯಷ್ಟೇ ಶಕ್ತಿ ಆರಾಧನೆಯೂ ಪ್ರಾಚೀನ. ಜ್ಞಾನ, ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಂಪತ್ತಿನ ಜೊತೆಗೆ ಸಭ್ಯತೆ, ಸಂಸ್ಕೃತಿಯೂ ಬೆಳೆಯಬೇಕು’ ಎಂದರು.</p>.<p>ದಾವಣಗೆರೆ-ಹರಿಹರ ಅರ್ಬನ್ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ, ‘ಭೌತಿಕ ಜೀವನ ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕು. ಶ್ರದ್ಧೆ ಇದ್ದರೆ ಧರ್ಮ, ಸಂಸ್ಕೃತಿ ಉಳಿಯಲು ಸಾಧ್ಯ. ವೈಚಾರಿಕತೆ ಹೆಸರಿನಲ್ಲಿ ನಾಡಿನ ಸಂಸ್ಕೃತಿ ನಾಶವಾಗಬಾರದು’ ಎಂದು ಹೇಳಿದರು.</p>.<p>ಆವರಗೊಳ್ಳದ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ‘ಹೊರಗಿನ ಕತ್ತಲೆ ಕಳೆಯಲು ದೀಪ ಬೇಕು. ಅಂತರಂಗದ ಕತ್ತಲೆ ಕಳೆಯಲು ಗುರು ಬೋಧನೆ ಮುಖ್ಯ’ ಎಂದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಎಸ್.ಜಿ. ಉಳವಯ್ಯ, ಮುಖಂಡರಾದ ಎಸ್.ಜೆ. ಶ್ರೀಧರ, ಅಕ್ಕಿ ರಾಜು, ‘ಧೂಡಾ’ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ ಹಾಜರಿದ್ದರು.</p>.<p>ಸಮಾರಂಭಕ್ಕೂ ಮುನ್ನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅವರನ್ನು ಸಾರೋಟಿನಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು. ಕುಂಭ ಹೊತ್ತು, ಆರತಿ ಹಿಡಿದ ಮಹಿಳೆಯರು ಜಾನಪದ ಕಲಾತಂಡಗಳು ಉತ್ಸವದಲ್ಲಿ ಪಾಲ್ಗೊಂಡು ಮೆರವಣಿಗೆಗೆಯಲ್ಲಿ ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>