ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಬರ ಪರಿಶೀಲನಾ ಸಭೆ ನಡೆಸಿದ ಅವರು, ‘ಭದ್ರಾ ಕಾಲುವೆ ಹಾಗೂ ತುಂಗಭದ್ರಾ ನದಿಯಲ್ಲಿ ಅಕ್ರಮ ಪಂಪ್ಸೆಟ್ಗಳ ಹಾವಳಿ ಹೆಚ್ಚಿದೆ. ಇದರ ಪರಿಣಾಮ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಕಾರ ಪಡೆದು ಅಧಿಕಾರಿಗಳ ತಂಡ ರಚಿಸಿಕೊಂಡು ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿ’ ಎಂದು ಆದೇಶಿಸಿದರು.