<p><strong>ಹೊನ್ನಾಳಿ:</strong> ‘ಇರಾನ್ ದೇಶದ ಸರ್ವಾಧಿಕಾರಿ ಅಯಾತೊಲ್ಲಾ ಇಮಾಮ್ ಖಮೇನಿ ಹತ್ಯೆಯನ್ನು ಖಂಡಿಸಿ ಚಿಕ್ಕಬಳ್ಳಾಪುರ ಸೇರಿ ದೇಶದ ವಿವಿಧ ಕಡೆ ಪ್ರತಿಭಟನೆ ಮಾಡಿರುವುದು ಖಂಡನೀಯ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಮಂಗಳವಾರ ತಾಲ್ಲೂಕಿನ ಕತ್ತಿಗೆ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಬಗ್ಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇರಾನ್ ಸರ್ವಾಧಿಕಾರಿಯ ಹತ್ಯೆ ಖಂಡಿಸಿ ದೇಶದಲ್ಲಿ ಪ್ರತಿಭಟನೆ ಮಾಡುವುದು ಅರ್ಥಹೀನ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧಕ್ಕೂ ನಮ್ಮ ದೇಶಕ್ಕೂ ಏನು ಸಂಬಂಧ. ಮೊದಲು ನಮ್ಮ ದೇಶದ ಮಣ್ಣಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಹೇಳಿದರು.</p>.<p>‘ಪುಲ್ವಾಮದಲ್ಲಿ ನಮ್ಮ ಸೈನಿಕರು ಹತ್ಯೆಯಾದಾಗ, ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ನಮ್ಮ ಹಿಂದೂಗಳು ಹತ್ಯೆಯಾದಾಗ ಹಾಗೂ ಬಾಂಗ್ಲಾ ದೇಶದಲ್ಲಿ ನಮ್ಮ ಹಿಂದೂಗಳ ನರಮೇಧ ಆದಾಗ ಪ್ರತಿಭಟನೆಗಳನ್ನು ಮಾಡದ ಇವರು ಇರಾನ್ ಸರ್ವಾಧಿಕಾರಿ ಹತ್ಯೆಯಾದಾಗ ಮಾಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>ಖಂಡನೆ: ‘ಇರಾನ್ ದೇಶದ ಸರ್ವಾಧಿಕಾರಿ ಖಮೇನಿ ಹತ್ಯೆಯಾದರೆ ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಪ್ರತಿಭಟನೆ ಮಾಡಿ ಅವರ ಪ್ರತಿಕೃತಿ ದಹನ ಮಾಡುತ್ತಿರುವುದು ಖಂಡನಿಯ. ದುಬೈ, ಕುವೈತ್ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ’ ಎಂದು ರೇಣುಕಾಚಾರ್ಯ ಹೇಳಿದರು.</p>.<p>ಮುಖಂಡರಾದ ಸಿ.ಆರ್. ಶಿವಾನಂದ್, ಮಾದೇನಹಳ್ಳಿ ನಾಗರಾಜ್, ಕತ್ತಿಗೆ ರಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ಇರಾನ್ ದೇಶದ ಸರ್ವಾಧಿಕಾರಿ ಅಯಾತೊಲ್ಲಾ ಇಮಾಮ್ ಖಮೇನಿ ಹತ್ಯೆಯನ್ನು ಖಂಡಿಸಿ ಚಿಕ್ಕಬಳ್ಳಾಪುರ ಸೇರಿ ದೇಶದ ವಿವಿಧ ಕಡೆ ಪ್ರತಿಭಟನೆ ಮಾಡಿರುವುದು ಖಂಡನೀಯ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಮಂಗಳವಾರ ತಾಲ್ಲೂಕಿನ ಕತ್ತಿಗೆ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಬಗ್ಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇರಾನ್ ಸರ್ವಾಧಿಕಾರಿಯ ಹತ್ಯೆ ಖಂಡಿಸಿ ದೇಶದಲ್ಲಿ ಪ್ರತಿಭಟನೆ ಮಾಡುವುದು ಅರ್ಥಹೀನ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧಕ್ಕೂ ನಮ್ಮ ದೇಶಕ್ಕೂ ಏನು ಸಂಬಂಧ. ಮೊದಲು ನಮ್ಮ ದೇಶದ ಮಣ್ಣಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಹೇಳಿದರು.</p>.<p>‘ಪುಲ್ವಾಮದಲ್ಲಿ ನಮ್ಮ ಸೈನಿಕರು ಹತ್ಯೆಯಾದಾಗ, ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ನಮ್ಮ ಹಿಂದೂಗಳು ಹತ್ಯೆಯಾದಾಗ ಹಾಗೂ ಬಾಂಗ್ಲಾ ದೇಶದಲ್ಲಿ ನಮ್ಮ ಹಿಂದೂಗಳ ನರಮೇಧ ಆದಾಗ ಪ್ರತಿಭಟನೆಗಳನ್ನು ಮಾಡದ ಇವರು ಇರಾನ್ ಸರ್ವಾಧಿಕಾರಿ ಹತ್ಯೆಯಾದಾಗ ಮಾಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>ಖಂಡನೆ: ‘ಇರಾನ್ ದೇಶದ ಸರ್ವಾಧಿಕಾರಿ ಖಮೇನಿ ಹತ್ಯೆಯಾದರೆ ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಪ್ರತಿಭಟನೆ ಮಾಡಿ ಅವರ ಪ್ರತಿಕೃತಿ ದಹನ ಮಾಡುತ್ತಿರುವುದು ಖಂಡನಿಯ. ದುಬೈ, ಕುವೈತ್ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ’ ಎಂದು ರೇಣುಕಾಚಾರ್ಯ ಹೇಳಿದರು.</p>.<p>ಮುಖಂಡರಾದ ಸಿ.ಆರ್. ಶಿವಾನಂದ್, ಮಾದೇನಹಳ್ಳಿ ನಾಗರಾಜ್, ಕತ್ತಿಗೆ ರಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>