<p><strong>ಹೊನ್ನಾಳಿ:</strong> ‘ಅವಳಿ ತಾಲ್ಲೂಕಿನ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು, ಅಥವಾ ರಸ್ತೆಗಳನ್ನು ದುರಸ್ತಿಪಡಿಸಲು ಶಾಸಕರು ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಎಷ್ಟು ಕೆಲಸ ಆಗಿದೆ ಎಂಬ ಬಗ್ಗೆ ಉತ್ತರ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.</p>.<p>ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ರಸ್ತೆ ದುರಸ್ತಿಯಾಗುವವರೆಗೆ ನಿರಂತರ ಪ್ರತಿಭನೆ ಹಮ್ಮಿಕೊಳ್ಳಲಾಗುವುದು. ಎರಡೂವರೆ ವರ್ಷಗಳಲ್ಲಿ ನಮ್ಮ ಭಾಗದ ರಾಜ್ಯ ಹೆದ್ದಾರಿಗೆ, ಜಿಲ್ಲಾ ರಸ್ತೆ ಹಾಗೂ ತಾಲ್ಲೂಕಿನ ರಸ್ತೆ ಮತ್ತು ಒಳರಸ್ತೆಗಳ ಅಭಿವೃದ್ಧಿಗೆ ಶಾಸಕರು ಎಷ್ಟು ಅನುದಾನ ತಂದಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಮುಖಂಡ ಮಾರುತಿನಾಯ್ಕ, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ನೆಲಹೊನ್ನೆ ಮಂಜುನಾಥ್, ಕುಂದೂರು ಅನಿಲ್, ಹನುಮಂತಪ್ಪ, ಪುರಸಭೆ ಸದಸ್ಯ ರಂಗನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ಅವಳಿ ತಾಲ್ಲೂಕಿನ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು, ಅಥವಾ ರಸ್ತೆಗಳನ್ನು ದುರಸ್ತಿಪಡಿಸಲು ಶಾಸಕರು ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಎಷ್ಟು ಕೆಲಸ ಆಗಿದೆ ಎಂಬ ಬಗ್ಗೆ ಉತ್ತರ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.</p>.<p>ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ರಸ್ತೆ ದುರಸ್ತಿಯಾಗುವವರೆಗೆ ನಿರಂತರ ಪ್ರತಿಭನೆ ಹಮ್ಮಿಕೊಳ್ಳಲಾಗುವುದು. ಎರಡೂವರೆ ವರ್ಷಗಳಲ್ಲಿ ನಮ್ಮ ಭಾಗದ ರಾಜ್ಯ ಹೆದ್ದಾರಿಗೆ, ಜಿಲ್ಲಾ ರಸ್ತೆ ಹಾಗೂ ತಾಲ್ಲೂಕಿನ ರಸ್ತೆ ಮತ್ತು ಒಳರಸ್ತೆಗಳ ಅಭಿವೃದ್ಧಿಗೆ ಶಾಸಕರು ಎಷ್ಟು ಅನುದಾನ ತಂದಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಮುಖಂಡ ಮಾರುತಿನಾಯ್ಕ, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ನೆಲಹೊನ್ನೆ ಮಂಜುನಾಥ್, ಕುಂದೂರು ಅನಿಲ್, ಹನುಮಂತಪ್ಪ, ಪುರಸಭೆ ಸದಸ್ಯ ರಂಗನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>