‘ಎಚ್. ಕಡದಕಟ್ಟೆ ಗ್ರಾಮ ಪಂಚಾಯಿತಿಗೆ ಕಾನೂನಿನ ಪ್ರಕಾರ ಪಿಡಿಒ ಆಗಿ ವಿಜಯ್ ಗೌಡರ್ ಅವರನ್ನು ನೇಮಕ ಮಾಡಲಾಗಿದೆ. ಆದರೆ ಶಾಸಕರು ಇವರಿಗೆ ಕರ್ತವ್ಯ ನಿರ್ವಹಿಸಲು ಬಿಡದೇ, ಭ್ರಷ್ಟಾಚಾರದಿಂದಾಗಿ ಅಮಾನತು ಆಗಿರುವ ಪಿಡಿಒ ಜಯಕುಮಾರ್ ಅವರಿಗೆ ಶಿಫಾರಸ್ಸು ಪತ್ರ ನೀಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಿಡಿಒಗಳು ಇದ್ದಾರೆ. 15 ದಿನಗಳಿಂದ ರಜೆಯಲ್ಲಿರುವ ಜಯಕುಮಾರ್ ಕರ್ತವ್ಯಕ್ಕೆ ಹಾಜರಾಗಿರುವ ವಿಜಯ್ ಗೌಡರ್ ಅವರಿಗೆ ಅಧಿಕಾರ ಹಸ್ತಾಂತರಿಸಿಲ್ಲ. ಇದರ ವಿರುದ್ಧ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ’ ಎಂದು ಬೇಸರವ್ಯಕ್ತಪಡಿಸಿದರು.