<p>ಹೊನ್ನಾಳಿ: ಜಾತ್ಯತೀತ ಹಾಗೂ ರಾಷ್ಟ್ರೀಯ ಮನೋಭಾವದಿಂದ ಕೆಲಸ ಮಾಡುತ್ತಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ ಮಾತ್ರ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. </p>.<p>ಇಲ್ಲಿನ ಗುರುಭವನದಲ್ಲಿ ಬಿಜೆಪಿಯ ಹೊನ್ನಾಳಿ, ನ್ಯಾಮತಿ ತಾಲ್ಲೂಕು ನೂತನ ಮಂಡಲ ಅಧ್ಯಕ್ಷ ಅರಕೆರೆ ನಾಗರಾಜ್ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬೂತ್ನಿಂದ ರಾಜ್ಯದವರೆಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಕ್ಷದ ತತ್ವ ಸಿದ್ಧಾಂತಗಳ ಅಡಿ ನಡೆಯುತ್ತದೆ. ಇಲ್ಲಿ ಯಾರ ಶಿಫಾರಸು ನಡೆಯುವುದಿಲ್ಲ. ಆದರೂ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದರು. </p>.<p>ನಿರ್ಗಮಿತ ಅಧ್ಯಕ್ಷ ಜೆ.ಕೆ.ಸುರೇಶ್ ಅವರು ನೂತನ ಅಧ್ಯಕ್ಷ ಅರಕೆರೆ ನಾಗರಾಜ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. </p>.<p>ನೂತನ ಅಧ್ಯಕ್ಷ ಅರಕೆರೆ ನಾಗರಾಜ್ ಮಾತನಾಡಿ, ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕಿನ ಮುಖಂಡರು, ಕಾರ್ಯಕರ್ತರ ಸಹಕಾರದಿಂದ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಮತ್ತು ರೇಣುಕಾಚಾರ್ಯ ಅವರನ್ನು ಮತ್ತೆ ಶಾಸಕರಾಗಿ ಮಾಡುವುದು ತಮ್ಮ ಗುರಿ’ ಎಂದರು. </p>.<p>ಜಿಲ್ಲಾ ಚುನಾವಣೆ ಉಸ್ತುವಾರಿ ದತ್ತಾತ್ರೇಯ, ಚುನಾವಣಾ ವೀಕ್ಷಕ ಬೈರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಮುಖಂಡ ಕೆ.ಪಿ.ಕುಬೇಂದ್ರಪ್ಪ ಅವರು ಮಾತನಾಡಿದರು.</p>.<p>ಮುಖಂಡರಾದ ಸಿ.ಆರ್.ಶಿವಾನಂದ, ನೆಲಹೊನ್ನೆ ಮಂಜುನಾಥ್, ಕೆ.ರಂಗಪ್ಪ, ಟಿ.ಜಿ.ರಮೇಶ್ ಗೌಡ, ರವಿಕುಮಾರ್, ಶಿವು ಹುಡೇದ್, ದಿಡಗೂರು ಫಾಲಾಕ್ಷಪ್ಪ, ಕಡ್ಲೆಬಾಳು ಧನಂಜಯ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ಜಾತ್ಯತೀತ ಹಾಗೂ ರಾಷ್ಟ್ರೀಯ ಮನೋಭಾವದಿಂದ ಕೆಲಸ ಮಾಡುತ್ತಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ ಮಾತ್ರ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. </p>.<p>ಇಲ್ಲಿನ ಗುರುಭವನದಲ್ಲಿ ಬಿಜೆಪಿಯ ಹೊನ್ನಾಳಿ, ನ್ಯಾಮತಿ ತಾಲ್ಲೂಕು ನೂತನ ಮಂಡಲ ಅಧ್ಯಕ್ಷ ಅರಕೆರೆ ನಾಗರಾಜ್ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬೂತ್ನಿಂದ ರಾಜ್ಯದವರೆಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಕ್ಷದ ತತ್ವ ಸಿದ್ಧಾಂತಗಳ ಅಡಿ ನಡೆಯುತ್ತದೆ. ಇಲ್ಲಿ ಯಾರ ಶಿಫಾರಸು ನಡೆಯುವುದಿಲ್ಲ. ಆದರೂ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದರು. </p>.<p>ನಿರ್ಗಮಿತ ಅಧ್ಯಕ್ಷ ಜೆ.ಕೆ.ಸುರೇಶ್ ಅವರು ನೂತನ ಅಧ್ಯಕ್ಷ ಅರಕೆರೆ ನಾಗರಾಜ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. </p>.<p>ನೂತನ ಅಧ್ಯಕ್ಷ ಅರಕೆರೆ ನಾಗರಾಜ್ ಮಾತನಾಡಿ, ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕಿನ ಮುಖಂಡರು, ಕಾರ್ಯಕರ್ತರ ಸಹಕಾರದಿಂದ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಮತ್ತು ರೇಣುಕಾಚಾರ್ಯ ಅವರನ್ನು ಮತ್ತೆ ಶಾಸಕರಾಗಿ ಮಾಡುವುದು ತಮ್ಮ ಗುರಿ’ ಎಂದರು. </p>.<p>ಜಿಲ್ಲಾ ಚುನಾವಣೆ ಉಸ್ತುವಾರಿ ದತ್ತಾತ್ರೇಯ, ಚುನಾವಣಾ ವೀಕ್ಷಕ ಬೈರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಮುಖಂಡ ಕೆ.ಪಿ.ಕುಬೇಂದ್ರಪ್ಪ ಅವರು ಮಾತನಾಡಿದರು.</p>.<p>ಮುಖಂಡರಾದ ಸಿ.ಆರ್.ಶಿವಾನಂದ, ನೆಲಹೊನ್ನೆ ಮಂಜುನಾಥ್, ಕೆ.ರಂಗಪ್ಪ, ಟಿ.ಜಿ.ರಮೇಶ್ ಗೌಡ, ರವಿಕುಮಾರ್, ಶಿವು ಹುಡೇದ್, ದಿಡಗೂರು ಫಾಲಾಕ್ಷಪ್ಪ, ಕಡ್ಲೆಬಾಳು ಧನಂಜಯ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>