ದಾವಣಗೆರೆ: ‘ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಇಂತಹ ಸ್ಥಿತಿಯಲ್ಲಿ ₹ 35,000 ಕೋಟಿಗೂ ಹೆಚ್ಚು ಅನುದಾನ ಬೇಕು. ಬರ ಪರಿಹಾರ ಕಾಮಗಾರಿ ಕೈಗೊಳ್ಳದ, ರೈತರ ಖಾತೆಗೆ ಹಣ ಜಮಾ ಮಾಡದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹10,000 ಕೋಟಿ ಕೊಡುತ್ತೇವೆ ಎನ್ನುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.