<p><strong>ದಾವಣಗೆರೆ: </strong>ಲಾಕ್ಡೌನ್ ಜಾರಿಯಾಗಿರುವುದರಿಂದ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ಲಾಕ್ಡೌನ್ ಸಡಿಲಿಸಿ ಮಧ್ಯಾಹ್ನ 3ರವರೆಗೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.</p>.<p>ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ರೈತರ ಸಂಖ್ಯೆ ಹೆಚ್ಚಿದೆ. ಬೆಳಿಗ್ಗೆ ತರಕಾರಿ ಕೊಯ್ದು ತಂದು ಮಾರಾಟ ಮಾಡಲು, ಮಂಗಳೂರು, ಉಡುಪಿ ಮತ್ತಿತರ ಜಿಲ್ಲೆಗಳಿಗೆ ಸರಬರಾಜು ಮಾಡಲು ಈ ಅವಧಿ ಸಾಕಾಗುವುದಿಲ್ಲ. ತರಕಾರಿ, ಶೇಂಗಾ, ಮೆಕ್ಕೆಜೋಳಗಳನ್ನು ದಾವಣಗೆರೆ ಎಪಿಎಂಸಿಗೆ ಸಾಗಾಟ ಮಾಡಬೇಕಾಗುತ್ತದೆ. ಅಲ್ಲಿ ತಲುಪುವಷ್ಟರಲ್ಲಿ 10 ಗಂಟೆ ದಾಟಿರುತ್ತದೆ. ಅವಸರದಲ್ಲಿ ಕಡಿಮೆ ಬೆಲೆಗೆ ನೀಡಿ ಬರಬೇಕಾಗುತ್ತದೆ. ಅದಕ್ಕಾಗಿ ಮಧ್ಯಾಹ್ನ 3ರವರೆಗೆ ಓಡಾಟದ ಸಮಯವನ್ನು ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ವಿಶ್ವನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಲಾಕ್ಡೌನ್ ಜಾರಿಯಾಗಿರುವುದರಿಂದ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ಲಾಕ್ಡೌನ್ ಸಡಿಲಿಸಿ ಮಧ್ಯಾಹ್ನ 3ರವರೆಗೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.</p>.<p>ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ರೈತರ ಸಂಖ್ಯೆ ಹೆಚ್ಚಿದೆ. ಬೆಳಿಗ್ಗೆ ತರಕಾರಿ ಕೊಯ್ದು ತಂದು ಮಾರಾಟ ಮಾಡಲು, ಮಂಗಳೂರು, ಉಡುಪಿ ಮತ್ತಿತರ ಜಿಲ್ಲೆಗಳಿಗೆ ಸರಬರಾಜು ಮಾಡಲು ಈ ಅವಧಿ ಸಾಕಾಗುವುದಿಲ್ಲ. ತರಕಾರಿ, ಶೇಂಗಾ, ಮೆಕ್ಕೆಜೋಳಗಳನ್ನು ದಾವಣಗೆರೆ ಎಪಿಎಂಸಿಗೆ ಸಾಗಾಟ ಮಾಡಬೇಕಾಗುತ್ತದೆ. ಅಲ್ಲಿ ತಲುಪುವಷ್ಟರಲ್ಲಿ 10 ಗಂಟೆ ದಾಟಿರುತ್ತದೆ. ಅವಸರದಲ್ಲಿ ಕಡಿಮೆ ಬೆಲೆಗೆ ನೀಡಿ ಬರಬೇಕಾಗುತ್ತದೆ. ಅದಕ್ಕಾಗಿ ಮಧ್ಯಾಹ್ನ 3ರವರೆಗೆ ಓಡಾಟದ ಸಮಯವನ್ನು ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ವಿಶ್ವನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>