<p><strong>ದಾವಣಗೆರೆ: </strong>ಸೂಳೆಕೆರೆಯ ಸರ್ವೆ ನಡೆಸಿ ಫೆ.29ರ ಒಳಗೆ ಅಂತಿಮ ವರದಿಯನ್ನು ನೀಡಬೇಕು. ತಪ್ಪಿದರೆ ಟೆಂಡರ್ದಾರ ಸಂಸ್ಥೆ ಮೇಲೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸೂಳೆಕೆರೆ(ಶಾಂತಿಸಾಗರ)ಯ ಸರ್ವೆ ಕಾರ್ಯ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಣದ ಕೈಗಳು ಸರ್ವೆಗೆ ಅಡ್ಡಿಪಡಿಸುತ್ತಿದ್ದರೆ ತಿಳಿಸಿ. ಖಡ್ಗ ಸಮಿತಿಯ ಹೋರಾಟದ ಫಲವಾಗಿ ಸೂಳೆಕೆರೆ (ಶಾಂತಿಸಾಗರ) ಸರ್ವೆ ಮಾಡಲು ಸರ್ಕಾರ ₹ 11 ಲಕ್ಷವನ್ನು ನೀರಾವರಿ ಇಲಾಖೆಗೆ ಬಿಡುಗಡೆ ಮಾಡಿದೆ. ಕೆರೆಯ ನೀರಿನ ಮಟ್ಟ ಇಳಿಯುತ್ತಿದ್ದಂತೆ ಸರ್ವೆ ಮಾಡಿ. ನೀಲನಕಾಶೆ ತಯಾರಿಸಿ ಜಿಲ್ಲಾ ಯೋಜನಾ ಇಲಾಖೆಯ ಮೂಲಕ ವರದಿ ಮಂಡಿಸಿ ಎಂದು ಸೂಚಿಸಿದರು.</p>.<p>ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಮಾತನಾಡಿ, ‘ಏಷ್ಯಾದ 2ನೇ ಅತಿದೊಡ್ಡ ಕೆರೆಯಾಗಿರುವ ಸೂಳೆಕೆರೆಗೆ ಇತಿಹಾಸ ಇದೆ. ಆದರೆ ಈವರೆಗೂ ಕೆರೆಯ ವಿಸ್ತೀರ್ಣ ಎಷ್ಟಿದೆ? ಎಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಸಿಗುತ್ತಿಲ್ಲ’ ಎಂದರು.</p>.<p>ಪುರಾತನ ದಾಖಲೆಗಳನ್ನು ನೋಡಿದರೆ 6,460 ಎಕರೆ ವಿಸ್ತೀರ್ಣವನ್ನು ಈ ಕೆರೆ ಹೊಂದಿದೆ. ಇದರಲ್ಲಿ ಸುಮಾರು 950 ಎಕರೆ ಜಾಗ ಒತ್ತುವರಿಯಾಗಿದೆ ಎಂಬ ಮಾಹಿತಿ ದೊರೆತಿದೆ. ಇದನ್ನು ಬಿಟ್ಟರೆ ಯಾವುದೇ ನಿಖರ, ಸ್ಪಷ್ಟ ಮಾಹಿತಿ ಇಲ್ಲ. ಸರ್ವೆಗೆ ಅನುದಾನ ಬಿಡುಗಡೆಯಾಗಿದ್ದರೂ ನೀರಾವರಿ ಇಲಾಖೆ ಸರ್ವೆ ಮಾಡದೇ ಸಬೂಬು ಹೇಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರವಾಸಿ ತಾಣವಾಗಿರುವುದರಿಂದ ನಿತ್ಯ ನೂರಾರು ಜನ ಕೆರೆ ವೀಕ್ಷಣೆ ಮಾಡುತ್ತಾರೆ. ಇಲ್ಲಿರುವ ರಂಗ ಮಂಟಪವು ಬೀಳುವ ಹಂತದಲ್ಲಿದೆ. ಕೆರೆ ಸರ್ವೆ ಕೂಡಲೇ ಮಾಡಬೇಕು. ರಂಗಮಂಟಪ ದುರಸ್ತಿ ಮಾಡಬೇಕು ಎಂದು ಖಡ್ಗ ಸಂಘಟನೆಯ ಹರೀಶ್ ಒತ್ತಾಯಿಸಿದರು.</p>.<p>ಸರ್ವೆಗಾಗಿ ಈಗಾಗಲೇ ಟೆಂಡರ್ ನೀಡಲಾಗಿದೆ. 2019ರಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಕೆರೆಯಲ್ಲಿ 27 ಅಡಿ ನೀರು ನಿಂತಿದೆ. ಕೆರೆಯ ಸುತ್ತಮುತ್ತ ಕೃಷಿ ಮಾಡಿರುವುದರಿಂದ ಸರ್ವೆ ಮಾಡಲು ಸಾಗುತ್ತಿಲ್ಲ. ನೀರಿನ ಪ್ರಮಾಣ 3 ಅಡಿ ಇಳಿದ ಕೂಡಲೇ ಸರ್ವೆ ಕಾರ್ಯ ಆರಂಭಿಸಲಾಗುವುದು. ಕೆರೆಯ ಅಭಿವೃದ್ಧಿಗಾಗಿ ₹ 10 ಲಕ್ಷ ಅನುದಾನ ಬಿಡುಗಡೆಯಾಗಿದೆ. ಸ್ಟೀಲ್ ಹ್ಯಾಂಡ್ವಾಲ್ ಸ್ಟ್ಯಾಂಡ್ಗಳನ್ನು ನಿರ್ಮಿಸಲಾಗುವುದು. ₹ 3.5 ಲಕ್ಷದಲ್ಲಿ ರಂಗಮಂಟಪದ ದುರಸ್ತಿ ಮಾಡಲಾಗುವುದು’ ಎಂದು ನೀರಾವರಿ ನಿಗಮದ ಸಹಾಯಕ ಎಂಜಿನಿಯರ್ ಜಿ.ಡಿ. ಗುಡ್ಡಪ್ಪ ಮಾಹಿತಿ ನೀಡಿದರು.</p>.<p>ಈ ಬಾರಿಯ ಅಧಿಕ ಮಳೆಯಿಂದಾಗಿ ಕೆರೆ ತುಂಬಿದೆ. ನೀರು ತುಂಬಿಕೊಂಡಿರುವ ಜಾಗವನ್ನು ಕೆರೆಯ ಗಡಿ ಎಂದು ನಿರ್ಧರಿಸಬೇಕು ಎಂದು ತೇಜಸ್ವಿ ಪಟೇಲ್ ಸಲಹೆ ನೀಡಿದರು.</p>.<p>ಕೆರೆಯ ಸರ್ವೆ ಕಾರ್ಯಕ್ಕಾಗಿ ಉಪ ವಿಭಾಗಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ವಿಶೇಷ ಅನುದಾನದಲ್ಲಿ ಡ್ರೋನ್ ಕ್ಯಾಮೆರಾ ಮೂಲಕ ವಿಡಿಯೊ ಮಾಡಿ ಈಗಿರುವ ನೀರು ಯಾವ ಕಡೆಗೆ ಹರಿಯುತ್ತದೆ ಎಂದು ದಾಖಲೆಗಳನ್ನು ಸಂಗ್ರಹಿಸಬೇಕು ಎಂದರು.</p>.<p>ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಚನ್ನಗಿರಿ ತಹಶೀಲ್ದಾರ್ ನಾಗರಾಜ್, ಖಡ್ಗ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಸೂಳೆಕೆರೆಯ ಸರ್ವೆ ನಡೆಸಿ ಫೆ.29ರ ಒಳಗೆ ಅಂತಿಮ ವರದಿಯನ್ನು ನೀಡಬೇಕು. ತಪ್ಪಿದರೆ ಟೆಂಡರ್ದಾರ ಸಂಸ್ಥೆ ಮೇಲೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸೂಳೆಕೆರೆ(ಶಾಂತಿಸಾಗರ)ಯ ಸರ್ವೆ ಕಾರ್ಯ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಣದ ಕೈಗಳು ಸರ್ವೆಗೆ ಅಡ್ಡಿಪಡಿಸುತ್ತಿದ್ದರೆ ತಿಳಿಸಿ. ಖಡ್ಗ ಸಮಿತಿಯ ಹೋರಾಟದ ಫಲವಾಗಿ ಸೂಳೆಕೆರೆ (ಶಾಂತಿಸಾಗರ) ಸರ್ವೆ ಮಾಡಲು ಸರ್ಕಾರ ₹ 11 ಲಕ್ಷವನ್ನು ನೀರಾವರಿ ಇಲಾಖೆಗೆ ಬಿಡುಗಡೆ ಮಾಡಿದೆ. ಕೆರೆಯ ನೀರಿನ ಮಟ್ಟ ಇಳಿಯುತ್ತಿದ್ದಂತೆ ಸರ್ವೆ ಮಾಡಿ. ನೀಲನಕಾಶೆ ತಯಾರಿಸಿ ಜಿಲ್ಲಾ ಯೋಜನಾ ಇಲಾಖೆಯ ಮೂಲಕ ವರದಿ ಮಂಡಿಸಿ ಎಂದು ಸೂಚಿಸಿದರು.</p>.<p>ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಮಾತನಾಡಿ, ‘ಏಷ್ಯಾದ 2ನೇ ಅತಿದೊಡ್ಡ ಕೆರೆಯಾಗಿರುವ ಸೂಳೆಕೆರೆಗೆ ಇತಿಹಾಸ ಇದೆ. ಆದರೆ ಈವರೆಗೂ ಕೆರೆಯ ವಿಸ್ತೀರ್ಣ ಎಷ್ಟಿದೆ? ಎಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಸಿಗುತ್ತಿಲ್ಲ’ ಎಂದರು.</p>.<p>ಪುರಾತನ ದಾಖಲೆಗಳನ್ನು ನೋಡಿದರೆ 6,460 ಎಕರೆ ವಿಸ್ತೀರ್ಣವನ್ನು ಈ ಕೆರೆ ಹೊಂದಿದೆ. ಇದರಲ್ಲಿ ಸುಮಾರು 950 ಎಕರೆ ಜಾಗ ಒತ್ತುವರಿಯಾಗಿದೆ ಎಂಬ ಮಾಹಿತಿ ದೊರೆತಿದೆ. ಇದನ್ನು ಬಿಟ್ಟರೆ ಯಾವುದೇ ನಿಖರ, ಸ್ಪಷ್ಟ ಮಾಹಿತಿ ಇಲ್ಲ. ಸರ್ವೆಗೆ ಅನುದಾನ ಬಿಡುಗಡೆಯಾಗಿದ್ದರೂ ನೀರಾವರಿ ಇಲಾಖೆ ಸರ್ವೆ ಮಾಡದೇ ಸಬೂಬು ಹೇಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರವಾಸಿ ತಾಣವಾಗಿರುವುದರಿಂದ ನಿತ್ಯ ನೂರಾರು ಜನ ಕೆರೆ ವೀಕ್ಷಣೆ ಮಾಡುತ್ತಾರೆ. ಇಲ್ಲಿರುವ ರಂಗ ಮಂಟಪವು ಬೀಳುವ ಹಂತದಲ್ಲಿದೆ. ಕೆರೆ ಸರ್ವೆ ಕೂಡಲೇ ಮಾಡಬೇಕು. ರಂಗಮಂಟಪ ದುರಸ್ತಿ ಮಾಡಬೇಕು ಎಂದು ಖಡ್ಗ ಸಂಘಟನೆಯ ಹರೀಶ್ ಒತ್ತಾಯಿಸಿದರು.</p>.<p>ಸರ್ವೆಗಾಗಿ ಈಗಾಗಲೇ ಟೆಂಡರ್ ನೀಡಲಾಗಿದೆ. 2019ರಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಕೆರೆಯಲ್ಲಿ 27 ಅಡಿ ನೀರು ನಿಂತಿದೆ. ಕೆರೆಯ ಸುತ್ತಮುತ್ತ ಕೃಷಿ ಮಾಡಿರುವುದರಿಂದ ಸರ್ವೆ ಮಾಡಲು ಸಾಗುತ್ತಿಲ್ಲ. ನೀರಿನ ಪ್ರಮಾಣ 3 ಅಡಿ ಇಳಿದ ಕೂಡಲೇ ಸರ್ವೆ ಕಾರ್ಯ ಆರಂಭಿಸಲಾಗುವುದು. ಕೆರೆಯ ಅಭಿವೃದ್ಧಿಗಾಗಿ ₹ 10 ಲಕ್ಷ ಅನುದಾನ ಬಿಡುಗಡೆಯಾಗಿದೆ. ಸ್ಟೀಲ್ ಹ್ಯಾಂಡ್ವಾಲ್ ಸ್ಟ್ಯಾಂಡ್ಗಳನ್ನು ನಿರ್ಮಿಸಲಾಗುವುದು. ₹ 3.5 ಲಕ್ಷದಲ್ಲಿ ರಂಗಮಂಟಪದ ದುರಸ್ತಿ ಮಾಡಲಾಗುವುದು’ ಎಂದು ನೀರಾವರಿ ನಿಗಮದ ಸಹಾಯಕ ಎಂಜಿನಿಯರ್ ಜಿ.ಡಿ. ಗುಡ್ಡಪ್ಪ ಮಾಹಿತಿ ನೀಡಿದರು.</p>.<p>ಈ ಬಾರಿಯ ಅಧಿಕ ಮಳೆಯಿಂದಾಗಿ ಕೆರೆ ತುಂಬಿದೆ. ನೀರು ತುಂಬಿಕೊಂಡಿರುವ ಜಾಗವನ್ನು ಕೆರೆಯ ಗಡಿ ಎಂದು ನಿರ್ಧರಿಸಬೇಕು ಎಂದು ತೇಜಸ್ವಿ ಪಟೇಲ್ ಸಲಹೆ ನೀಡಿದರು.</p>.<p>ಕೆರೆಯ ಸರ್ವೆ ಕಾರ್ಯಕ್ಕಾಗಿ ಉಪ ವಿಭಾಗಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ವಿಶೇಷ ಅನುದಾನದಲ್ಲಿ ಡ್ರೋನ್ ಕ್ಯಾಮೆರಾ ಮೂಲಕ ವಿಡಿಯೊ ಮಾಡಿ ಈಗಿರುವ ನೀರು ಯಾವ ಕಡೆಗೆ ಹರಿಯುತ್ತದೆ ಎಂದು ದಾಖಲೆಗಳನ್ನು ಸಂಗ್ರಹಿಸಬೇಕು ಎಂದರು.</p>.<p>ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಚನ್ನಗಿರಿ ತಹಶೀಲ್ದಾರ್ ನಾಗರಾಜ್, ಖಡ್ಗ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>