ಆ.14ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದಂತಹ ಹಲವು ತೀರ್ಪುಗಳಲ್ಲಿ ಫೇಸ್ಬುಕ್, ವಾಟ್ಸ್ಆ್ಯಪ್, ಟ್ವಿಟರ್, ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತಿಳಿಸಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೆಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸುವುದು ಸರಿಯಾದ ಕ್ರಮವಲ್ಲ ಎಂಬುದು ಜನರ ಅನಿಸಿಕೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.